Featured

ನಾನು ದುರಂತ ನಾಯಕನೋ? ದೃಢನಾಯಕನೋ ಸದ್ಯದಲ್ಲೇ ಗೊತ್ತಾಗಲಿದೆ ; ದೇವರು ಕೊಟ್ಟ ಅಧಿಕಾರ ಎಲ್ಲಿಯವರೆಗೂ ಬೆಂಬಲ ಸಿಗುತ್ತದೆಯೋ ಅಲ್ಲಿಯವರೆಗೂ ಯಶಸ್ವಿಯಾಗಿ ನಡೆಸುತ್ತೇನೆ : ಎಚ್ ಡಿಕೆ

ರಾಮನಗರ : ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನವರು ನೋವು ಕೊಡುತ್ತಿದ್ದಾರೆಂದು ನಾನು ಕಣ್ಣೀರಿಟ್ಟಿಲ್ಲ. ಸಾರ್ವಜನಿಕ ವಲಯದಿಂದ ಬೆಂಬಲ ಸಿಗುತ್ತಿಲ್ಲವೆಂಬ ನೋವಿಗೆ ಕಣ್ಣೀರಿಟ್ಟಿದ್ದೇನೆ. ಅದನ್ನು ಮಾಧ್ಯಮದವರು ತಿರುಚಿ ತಪ್ಪು ಸಂದೇಶ ನೀಡಿರುವುದು ಸರಿಯಲ್ಲ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಒಡಕು ಉಂಟಾಗಿದೆ ಎಂದು ತಪ್ಪಾಗಿ ಬಿಂಬಿಸಲಾಗಿದೆ. ಕಾಂಗ್ರೆಸ್ ನಾಯಕರು ತಮಗೆ ಮುಕ್ತ ಸಹಕಾರ ನೀಡುತ್ತಿದ್ದಾರೆ. ನನ್ನ ಕಾರ್ಯಕ್ರಮಗಳನ್ನು ನೋಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದವರು ನನಗೆ ಯಾವುದೇ ರೀತಿ ತೊಂದರೆ ಕೊಡುತ್ತಿಲ್ಲ. ಒಳ್ಳೆಯ ಕೆಲಸ ಮಾಡುವಾಗ ಜನರಿಂದ ಉತ್ತಮ ಬೆಂಬಲ ಸಿಗುತ್ತಿಲ್ಲ ಎಂಬ ಭಾವನೆ ನನ್ನ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಹೀಗಾಗಿ, ಕಣ್ಣೀರು ಹಾಕಿದ್ದೇನೆಂದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಾವ ನಾಯಕ ಎಂದು ಗೊತ್ತಾಗಲಿದೆ?

ಕುರ್ಚಿ ಉಳಿಸಿಕೊಳ್ಳಲು ರೈತರ ಸಾಲಮನ್ನಾ ಮಾಡಿಲ್ಲ. ರೈತರ ಹಿತದೃಷ್ಟಿಯಿಂದ ಮತ್ತು ನನ್ನ ಬದ್ಧತೆಯಿಂದ ಸಾಲ ಮನ್ನಾ ಮಾಡಿದ್ದೇನೆ. ಆದರೆ, ಬಿಜೆಪಿ ನಾಯಕರು ನನ್ನ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ನಾನು ದುರಂತ ನಾಯಕನೋ? ದೃಢನಾಯಕನೋ ಎಂಬುದು ಮುಂದಿನ ದಿನಗಳಲ್ಲಿ ಅವರಿಗೆ ಗೊತ್ತಾಗಲಿದೆ ಎಂದು ತೀಕ್ಷ್ಣವಾಗಿ ಉತ್ತರಿಸಿದರು. ದುರಂತ ನಾಯಕನಾಗಿ ಇದೀಗ 44 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಅದರೆ ದೃಢ ನಾಯಕರು ಎನಿಸಿಕೊಂಡಿರುವವರಿಂದ ಸಾಲ ಮನ್ನಾ ಏಕೆ ಆಗಲಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಹಿಂದೆ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಬೆಂಬಲ ನೀಡಿ, ನಂತರ ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಲ್ಲಿ ೧೫೦ ಕೋಟಿ ರು. ಹಗರಣ ಮಾಡಿದ್ದೇನೆಂದು ಸುಳ್ಳು ಆಪಾದನೆ ಹೊರಿಸಿ ಜನರ ಮುಂದೆ ನನ್ನ ಹೆಸರು ಕೆಡಿಸಲು ಹೋದ ಬಿಜೆಪಿ ನಾಯಕರ ಟೀಕೆಗೆ ಉತ್ತರ ಕೋಡಬೇಕಾಗಿಲ್ಲ. ದೇವರು ಕೊಟ್ಟ ಅಧಿಕಾರ ಎಲ್ಲಿಯವರೆಗೂ ಬೆಂಬಲ ಸಿಗುತ್ತದೆಯೋ ಅಲ್ಲಿಯವರೆಗೂ ಯಶಸ್ವಿಯಾಗಿ ನಡೆಸುತ್ತೇನೆ ಎಂದರು.

ಸಮ್ಮಿಶ್ರ ಸರ್ಕಾರ ಅಭಿವೃದ್ಧಿ ಜೊತೆಗೆ ರೈತ ಪರವಾದ ಚಿಂತನೆ ನಡೆಸುತ್ತಿದೆ. ಇದಕ್ಕೆ ಕಾಂಗ್ರೆಸ್ ಮುಕ್ತ ಸಹಕಾರವಿದ್ದು, ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರಿಗೆ ಕೃತಜ್ಞನಾಗಿದ್ದೇನೆ. ಎಂತಹ ಕಠಿಣ ಪರಿಸ್ಥಿತಿಯಲ್ಲೂ ದಿಟ್ಟ ಕ್ರಮ ಕೈಗೊಂಡಾಗ ಸಾರ್ವಜನಿಕವಾಗಿ ಬೆಂಬಲ ದೊರಕಬೇಕು. ಅದು ಸಾಧ್ಯವಾಗದೆ ಇದ್ದಾಗ ನನಗೆ ನೋವಾಗುವುದು ಸಹಜ ಎಂದು ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

24 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago