Featured

ನಾನು ದುರಂತ ನಾಯಕನೋ? ದೃಢನಾಯಕನೋ ಸದ್ಯದಲ್ಲೇ ಗೊತ್ತಾಗಲಿದೆ ; ದೇವರು ಕೊಟ್ಟ ಅಧಿಕಾರ ಎಲ್ಲಿಯವರೆಗೂ ಬೆಂಬಲ ಸಿಗುತ್ತದೆಯೋ ಅಲ್ಲಿಯವರೆಗೂ ಯಶಸ್ವಿಯಾಗಿ ನಡೆಸುತ್ತೇನೆ : ಎಚ್ ಡಿಕೆ

ರಾಮನಗರ : ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನವರು ನೋವು ಕೊಡುತ್ತಿದ್ದಾರೆಂದು ನಾನು ಕಣ್ಣೀರಿಟ್ಟಿಲ್ಲ. ಸಾರ್ವಜನಿಕ ವಲಯದಿಂದ ಬೆಂಬಲ ಸಿಗುತ್ತಿಲ್ಲವೆಂಬ ನೋವಿಗೆ ಕಣ್ಣೀರಿಟ್ಟಿದ್ದೇನೆ. ಅದನ್ನು ಮಾಧ್ಯಮದವರು ತಿರುಚಿ ತಪ್ಪು ಸಂದೇಶ ನೀಡಿರುವುದು ಸರಿಯಲ್ಲ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಒಡಕು ಉಂಟಾಗಿದೆ ಎಂದು ತಪ್ಪಾಗಿ ಬಿಂಬಿಸಲಾಗಿದೆ. ಕಾಂಗ್ರೆಸ್ ನಾಯಕರು ತಮಗೆ ಮುಕ್ತ ಸಹಕಾರ ನೀಡುತ್ತಿದ್ದಾರೆ. ನನ್ನ ಕಾರ್ಯಕ್ರಮಗಳನ್ನು ನೋಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದವರು ನನಗೆ ಯಾವುದೇ ರೀತಿ ತೊಂದರೆ ಕೊಡುತ್ತಿಲ್ಲ. ಒಳ್ಳೆಯ ಕೆಲಸ ಮಾಡುವಾಗ ಜನರಿಂದ ಉತ್ತಮ ಬೆಂಬಲ ಸಿಗುತ್ತಿಲ್ಲ ಎಂಬ ಭಾವನೆ ನನ್ನ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಹೀಗಾಗಿ, ಕಣ್ಣೀರು ಹಾಕಿದ್ದೇನೆಂದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಾವ ನಾಯಕ ಎಂದು ಗೊತ್ತಾಗಲಿದೆ?

ಕುರ್ಚಿ ಉಳಿಸಿಕೊಳ್ಳಲು ರೈತರ ಸಾಲಮನ್ನಾ ಮಾಡಿಲ್ಲ. ರೈತರ ಹಿತದೃಷ್ಟಿಯಿಂದ ಮತ್ತು ನನ್ನ ಬದ್ಧತೆಯಿಂದ ಸಾಲ ಮನ್ನಾ ಮಾಡಿದ್ದೇನೆ. ಆದರೆ, ಬಿಜೆಪಿ ನಾಯಕರು ನನ್ನ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ನಾನು ದುರಂತ ನಾಯಕನೋ? ದೃಢನಾಯಕನೋ ಎಂಬುದು ಮುಂದಿನ ದಿನಗಳಲ್ಲಿ ಅವರಿಗೆ ಗೊತ್ತಾಗಲಿದೆ ಎಂದು ತೀಕ್ಷ್ಣವಾಗಿ ಉತ್ತರಿಸಿದರು. ದುರಂತ ನಾಯಕನಾಗಿ ಇದೀಗ 44 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಅದರೆ ದೃಢ ನಾಯಕರು ಎನಿಸಿಕೊಂಡಿರುವವರಿಂದ ಸಾಲ ಮನ್ನಾ ಏಕೆ ಆಗಲಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಹಿಂದೆ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಬೆಂಬಲ ನೀಡಿ, ನಂತರ ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಲ್ಲಿ ೧೫೦ ಕೋಟಿ ರು. ಹಗರಣ ಮಾಡಿದ್ದೇನೆಂದು ಸುಳ್ಳು ಆಪಾದನೆ ಹೊರಿಸಿ ಜನರ ಮುಂದೆ ನನ್ನ ಹೆಸರು ಕೆಡಿಸಲು ಹೋದ ಬಿಜೆಪಿ ನಾಯಕರ ಟೀಕೆಗೆ ಉತ್ತರ ಕೋಡಬೇಕಾಗಿಲ್ಲ. ದೇವರು ಕೊಟ್ಟ ಅಧಿಕಾರ ಎಲ್ಲಿಯವರೆಗೂ ಬೆಂಬಲ ಸಿಗುತ್ತದೆಯೋ ಅಲ್ಲಿಯವರೆಗೂ ಯಶಸ್ವಿಯಾಗಿ ನಡೆಸುತ್ತೇನೆ ಎಂದರು.

ಸಮ್ಮಿಶ್ರ ಸರ್ಕಾರ ಅಭಿವೃದ್ಧಿ ಜೊತೆಗೆ ರೈತ ಪರವಾದ ಚಿಂತನೆ ನಡೆಸುತ್ತಿದೆ. ಇದಕ್ಕೆ ಕಾಂಗ್ರೆಸ್ ಮುಕ್ತ ಸಹಕಾರವಿದ್ದು, ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರಿಗೆ ಕೃತಜ್ಞನಾಗಿದ್ದೇನೆ. ಎಂತಹ ಕಠಿಣ ಪರಿಸ್ಥಿತಿಯಲ್ಲೂ ದಿಟ್ಟ ಕ್ರಮ ಕೈಗೊಂಡಾಗ ಸಾರ್ವಜನಿಕವಾಗಿ ಬೆಂಬಲ ದೊರಕಬೇಕು. ಅದು ಸಾಧ್ಯವಾಗದೆ ಇದ್ದಾಗ ನನಗೆ ನೋವಾಗುವುದು ಸಹಜ ಎಂದು ಹೇಳಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago