ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ , ನನಗೂ ಉಗ್ರರಿಗೂ ಯಾವುದೆ ಸಂಬಂಧವಿಲ್ಲ , ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ : ಆದಿತ್ಯ ರಾವ್ -Vishwanews24

ಬೆಂಗಳೂರು : ಮಂಗಳೂರು ಬಾಂಬ್​ ಪತ್ತೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ನನಗೂ ಉಗ್ರರಿಗೂ ಯಾವುದೆ ಸಂಬಂಧವಿಲ್ಲ ಎಂದು ಬಂಧಿತ ಆರೋಪಿ ಆದಿತ್ಯ ರಾವ್ ವಿಚಾರಣೆ ವೇಳೆ ಸ್ಪಷ್ಟನೆ ನೀಡಿದ್ದಾನೆ.

ಸೋಮವಾರ ಮಂಗಳೂರು ಏರ್​ಪೋರ್ಟ್​ನಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಮುಂಜಾನೆ ವಿಮಾನ ನಿಲ್ದಾಣಕ್ಕೆ ಆಟೋ ಮೂಲಕ ವ್ಯಕ್ತಿಯೋರ್ವ ಬಂದಿದ್ದ . ಈ ವೇಳೆ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ. ಈ ಬ್ಯಾಗ್​ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿತ್ತು. ಇದರ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ವಿಚಾರ ಚರ್ಚೆಯಲ್ಲಿರುವಾಗಲೇ ಪ್ರಕರಣದ ಆರೋಪಿ ಪೊಲೀಸರಿಗೆ ಶರಣಾಗಿದ್ದ.

 

ಪೊಲೀಸರು ಆದಿತ್ಯನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾನೆ. “ಬಾಂಬ್ ಇಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದವು. ಸಿಕ್ಕಿ ಬೀಳುವ ಭಯ ಶುರುವಾಗಿತ್ತು. ಘಟನೆ ಬಳಿಕ ತಪ್ಪಿನ  ಅರಿವಾಗಿತ್ತು. ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ,” ಎಂದಿದ್ದಾನೆ ಆದಿತ್ಯ.

ಪೊಲೀಸರು ಗುಂಡು ಹಾರಿಸಿದರೆ ಎನ್ನುವ ಭಯದಿಂದ ಆದಿತ್ಯ ಪೊಲೀಸರಿಗೆ ಶರಣಾಗಿದ್ದಾನಂತೆ. “ಇತ್ತೀಚೆಗೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸುವ ಪ್ರಕರಣಗಳು ಹೆಚ್ಚಾಗಿವೆ. ನನಗೂ ಗುಂಡು ಹೊಡೆಯಬಹುದು ಎಂಬ ಭಯವಿತ್ತು. ಹೀಗಾಗಿ ಡಿಜಿಪಿ ಕಚೇರಿಗೆ ಬಂದು ಶರಣಾಗಲು ನಿರ್ಧರಿಸಿದೆ,” ಎಂದು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.

ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago