ಬೆಂಗಳೂರು: ನಾನು ನಂದಿ ಅಲ್ಲ, ನಾನು ಜಗದೀಶ್. ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ. ಯಾರಾದ್ರೂ ನನ್ನನ್ನು ರೌಡಿಶೀಟರ್ ಅಂದ್ರೆ ಅವರ ವಿರುದ್ಧ ಕೇಸ್ ದಾಖಲು ಮಾಡ್ತೀನಿ ಎಂದು ರಮೇಶ್ ಜಾರಕಿಹೊಳಿ ಸಿಡಿ ಕೇಸ್ನ ಯುವತಿ ಪರ ವಕೀಲ ಜಗದೀಶ್ ಎಚ್ಚರಿಸಿದ್ದಾರೆ.
ಬುಧವಾರ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಜಗದೀಶ್, ನನ್ನ ವಿರುದ್ಧದ ಎಲ್ಲ ಕೇಸ್ಗಳು ಖುಲಾಸೆ ಆಗಿವೆ. ನಾವು ಕ್ಲೀನ್ಹ್ಯಾಂಡ್, ನಮ್ಮ ಚಾರಿತ್ರ್ಯವಧೆ ಮಾಡೋದು ಸರಿಯಲ್ಲ. ನಾನು ಕೆಂಪೇಗೌಡ ವಂಶಸ್ಥ. ಯಾರಾದ್ರೂ ನನ್ನನ್ನ ರೌಡಿಶೀಟರ್ ಅಂದ್ರೆ ಅವರ ವಿರುದ್ಧ ಕೇಸ್ ದಾಖಲು ಮಾಡ್ತೀನಿ ಎಂದ ಜಗದೀಶ್, ಸಿಸಿಬಿ ಇನ್ಸ್ಪೆಕ್ಟರ್ ಪುನೀತ್ ಹಿಂದೆ ಆರ್ಎಸ್ಎಸ್ ಮತ್ತು ಭಜರಂಗದಳ ಇದೆ ಎಂದು ಗಂಭೀರ ಆರೋಪ ಮಾಡಿದರು.
ಇದನ್ನೂ ಓದಿ : ಹುಬ್ಬಳ್ಳಿ, ಹೈದರಾಬಾದ್ ನಡುವಿನ ವಿಮಾನಯಾನಕ್ಕೆ ಚಾಲನೆ -Vishwanews24
ಸಿಡಿ ಪೊಲೀಸರು ಆರೋಪಿ(ರಮೇಶ್ ಜಾರಕಿಹೊಳಿ)ಗೆ ಸಹಕರಿಸುತ್ತಿರೋ ಬಗ್ಗೆ ದಾಖಲೆಯಿದೆ. ನಿನ್ನೆಯಿಂದ ದಾಖಲೆಯನ್ನ ಕಲೆ ಹಾಕಿದ್ದೇನೆ. ಇದಕ್ಕೆ ಎಸ್ಐಟಿ ಉತ್ತರ ಕೊಡುತ್ತಾ? ಎಸ್ಐಟಿ ಕುರಿತಾದ ಸಾಕ್ಷ್ಯಗಳು ನಮ್ಮ ಬಳಿ ಇದೆ. ನಿನ್ನೆ 164 ಹೇಳಿಕೆಯ ಸಂದರ್ಭದಲ್ಲಿ 150ಕ್ಕೂ ಹೆಚ್ಚು ವಕೀಲರು ಹಾಜರಿದ್ದರು. ನಾವು ಯಾರಿಗೂ ಬನ್ನಿ ಎಂದಿರಲಿಲ್ಲ. ಯುವತಿ ಪರವಾಗಿ ಅವರು ವಿಚಾರಣೆ ವೇಳೆ ಹಾಜರಿದ್ದಾರೆ. ವಿಚಾರಣೆ ಮುಗಿಸಿ ಹೊರ ಬಂದಾಗ ಯುವತಿಯ ವಿಡಿಯೋವನ್ನು ಪೊಲೀಸರೇ ಮಾಡಿ ಮಾಧ್ಯಮಕ್ಕೆ ಹಂಚಿದ್ದಾರೆ ಎಂದು ವಕೀಲ ಜಗದೀಶ್ ಅಸಮಾಧಾನ ಹೊರಹಾಕಿದರು.
ಕೆಪಿಸಿಸಿಯ ಸೂರ್ಯ ಮುಕುಂದರಾಜ್ ಬಂದ ಪೊಟೋವನ್ನು ಪೊಲೀಸರೇ ವೈರಲ್ ಮಾಡಿದ್ದಾರೆ. ಸೂರ್ಯ ಮುಕುಂದರಾಜ್ ವಕೀಲರಾಗಿ ಹಾಜರಿದ್ದರು. ಫೋಟೋ ವೈರಲ್ ಮಾಡಿದ ಎಸ್ಐಟಿ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತೇನೆ. ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವರ ವಿರುದ್ಧ ದೂರು ನೀಡುತ್ತೇನೆ ಎಂದು ಜಗದೀಶ್ ಕಿಡಿಕಾರಿದರು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…