Featured

ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಡಿ.ಕೆ ಶಿ ಶಪಥ – Vishwanews24

ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ

ಈ ಬಾರಿ ಬಿಜೆಪಿ 40 ಪರ್ಸೆಂಟ್‌ನಂತೆ 40 ಸೀಟುಗಳನ್ನ ಗೆಲ್ಲಲಿದೆ..

ಮೇ 13 ತಾರೀಖು ಬಿಜೆಪಿಯ ಶವ ಆಚರಣೆ ಆಗಲಿದೆ..

ಮೈಸೂರು: ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ಮಾಡುತ್ತೆ. ಬಿಜೆಪಿ 40 ಸೀಟಿಗೆ ನಿಲ್ಲುತ್ತದೆ. ನಾವು 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಶಪಥ ಮಾಡಿದ್ದಾರೆ.

ಮೈಸೂರಿನಲ್ಲಿ ಕಾಂಗ್ರೆಸ್  ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, `ಬಿಜೆಪಿ ಅಧಿಕಾರಕ್ಕೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ’ ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿ 40 ಪರ್ಸೆಂಟ್‌ನಂತೆ 40 ಸೀಟುಗಳನ್ನ ಗೆಲ್ಲಲಿದೆ ಎಂದು ಕುಟುಕಿದ್ದಾರೆ.

ಡಬಲ್ ಎಂಜಿನ್ ಸರ್ಕಾರದ ಮೀಸಲಾತಿಯ ಮೋಸದಾಟ ಬಯಲಾಗಿದೆ. ಬಿಜೆಪಿ ವಿಶ್ವಾಸ ದ್ರೋಹಿ ಪಾರ್ಟಿ ಅನ್ನೋದು ಸುಪ್ರೀಂ ಕೋರ್ಟ್ನಲ್ಲಿ ತಿಳಿದಿದೆ. ಚುನಾವಣಾ ವೇಳೆ ಜೇನುಗೂಡಿಗೆ ಕೈ ಹಾಕಿ ಮೋಸ ಮಾಡಿದ್ದಾರೆ. ಮೃತ್ಯುಂಜಯ ಸ್ವಾಮೀಜಿಗಳು ಹೇಳಿದಂತೆ ತಲೆ ಮೇಲೆ ತುಪ್ಪ ಇಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಅಮಿತ್ ಶಾ  ಅವರೇ ನಿಮಗೆ ಬದ್ಧತೆ ಇದೆಯೇ? ಮೋಸ ಮಾಡಿಕೊಂಡು ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಾ? ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಾ? ನೀವು ಲಿಂಗಾಯತರು, ಒಕ್ಕಲಿಗರಿಗೆ ಕೊಟ್ಟಿರೋ 2 ಪರ್ಸೆಂಟ್ ವಿತ್ ಡ್ರಾ ಆಗಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago