ಮೈಸೂರು: ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ಮಾಡುತ್ತೆ. ಬಿಜೆಪಿ 40 ಸೀಟಿಗೆ ನಿಲ್ಲುತ್ತದೆ. ನಾವು 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶಪಥ ಮಾಡಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, `ಬಿಜೆಪಿ ಅಧಿಕಾರಕ್ಕೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ’ ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿ 40 ಪರ್ಸೆಂಟ್ನಂತೆ 40 ಸೀಟುಗಳನ್ನ ಗೆಲ್ಲಲಿದೆ ಎಂದು ಕುಟುಕಿದ್ದಾರೆ.
ಡಬಲ್ ಎಂಜಿನ್ ಸರ್ಕಾರದ ಮೀಸಲಾತಿಯ ಮೋಸದಾಟ ಬಯಲಾಗಿದೆ. ಬಿಜೆಪಿ ವಿಶ್ವಾಸ ದ್ರೋಹಿ ಪಾರ್ಟಿ ಅನ್ನೋದು ಸುಪ್ರೀಂ ಕೋರ್ಟ್ನಲ್ಲಿ ತಿಳಿದಿದೆ. ಚುನಾವಣಾ ವೇಳೆ ಜೇನುಗೂಡಿಗೆ ಕೈ ಹಾಕಿ ಮೋಸ ಮಾಡಿದ್ದಾರೆ. ಮೃತ್ಯುಂಜಯ ಸ್ವಾಮೀಜಿಗಳು ಹೇಳಿದಂತೆ ತಲೆ ಮೇಲೆ ತುಪ್ಪ ಇಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ
ಅಮಿತ್ ಶಾ ಅವರೇ ನಿಮಗೆ ಬದ್ಧತೆ ಇದೆಯೇ? ಮೋಸ ಮಾಡಿಕೊಂಡು ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಾ? ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಾ? ನೀವು ಲಿಂಗಾಯತರು, ಒಕ್ಕಲಿಗರಿಗೆ ಕೊಟ್ಟಿರೋ 2 ಪರ್ಸೆಂಟ್ ವಿತ್ ಡ್ರಾ ಆಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…