ಬೆಂಗಳೂರು:“ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ದಿಲ್ಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ವದಂತಿಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ತಿಳಿಸಿದರು.
“ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು” ಎಂದು ಸ್ಪಷ್ಟಪಡಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…