ನವದೆಹಲಿ, :2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಬದಲಾಗಿ ನಿತಿನ್ ಗಡ್ಕರಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಸದ್ಯ ಸ್ವತಃ ಗಡ್ಕರಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿಯಾವುವ ಯಾವುದೇ ಆಸೆ ನನಗೆ ಇಲ್ಲ. ನನ್ನ ಮನಸ್ಸಿನಲ್ಲಿ ಹಾಗೂ ಆರ್ ಎಸ್ಎಸ್ ನಲ್ಲೂ ಇಂತಹ ಯಾವುದೇ ಚಿಂತನೆ ಇಲ್ಲ. ನಮಗೆ ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ ಆಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಬೇಕೆಂಬುದು ದೇಶದ ನಾಗರಿಕರ ಅಪೇಕ್ಷೆಯಾಗಿದೆ. ಅವರೇ ಮುಂದಿನ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ವಿಚಾರದಲ್ಲಿ ತಮ್ಮ ಅಥವಾ ಆರ್ಎಸ್ಎಸ್ ನಾಯಕರ ಯಾವುದೇ ಆಕ್ಷೇಪವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಮತ್ತು ನನ್ನ ಪಕ್ಷ ಮೋದಿ ಜೀ ಅವರ ಬೆನ್ನಿಗೆ ನಿಂತು ಅವರ ಉತ್ತಮ ಕಾರ್ಯಗಳನ್ನು ಬೆಂಬಲಿಸುತ್ತೇವೆ. ನಾನು ಯಾವುದೇ ಲೆಕ್ಕಾಚಾರಗಳನ್ನು ಮಾಡಿಲ್ಲ. ಅಲ್ಲದೇ ಯಾವುದೇ ಟಾರ್ಗೆಟ್ ಕೂಡ ಇಟ್ಟುಕೊಂಡಿಲ್ಲ. ನಾನು ನಾನು ನಂಬಿದ ದಾರಿ ಎಲ್ಲಿ ಕರೆದ್ಯೊಯುತ್ತದೆ ಅಲ್ಲಿಗೆ ಸಾಗುತ್ತೇನೆ. ನನಗೆ ನೀಡಿದ ಜವಾಬ್ದಾರಿಗಳನ್ನು ಮಾತ್ರ ನಿರ್ವಹಿಸುತ್ತೇನೆ ಎಂದಿದ್ದಾರೆ.
ಈ ಹಿಂದೆ ತಾವು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಹೇಳಿದ್ದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತಿನ್ ಗಡ್ಕರಿ, ಈ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂಬ ಅರ್ಥದಲ್ಲಿ ನಾನು ಹೇಳಿದ್ದೆ ಹೊರತು ನಾನೇ ಆ ಹುದ್ದೆಗೆ ಪ್ರಬಲ ಪ್ರತಿಸ್ಪರ್ಧಿ ಎಂಬ ರೀತಿ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದರು.
ಈ ಹಿಂದೆ ಗಡ್ಕರಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಮೆಚ್ಚುಗೆ ಸೂಚಿಸಿ ಬಿಜೆಪಿಯಲ್ಲಿರುವ ಎದೆಗಾರಿಕೆಯ ನಾಯಕ ಎಂದರೆ ಅದು ಗಡ್ಕರಿ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…
ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…
ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ…
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…