Featured

ನಾನು ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ , ದೇಶದ ಅಭಿವೃದ್ಧಿಯೇ ನಮ್ಮ ಮೊದಲ ಆಯ್ಕೆ: ಗಡ್ಕರಿ ಸ್ಪಷ್ಟನೆ – Vishwanews24

ನವದೆಹಲಿ, :2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಬದಲಾಗಿ ನಿತಿನ್ ಗಡ್ಕರಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಸದ್ಯ ಸ್ವತಃ ಗಡ್ಕರಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿಯಾವುವ ಯಾವುದೇ ಆಸೆ ನನಗೆ ಇಲ್ಲ. ನನ್ನ ಮನಸ್ಸಿನಲ್ಲಿ ಹಾಗೂ ಆರ್ ಎಸ್‍ಎಸ್ ನಲ್ಲೂ ಇಂತಹ ಯಾವುದೇ ಚಿಂತನೆ ಇಲ್ಲ. ನಮಗೆ ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ ಆಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಬೇಕೆಂಬುದು ದೇಶದ ನಾಗರಿಕರ ಅಪೇಕ್ಷೆಯಾಗಿದೆ. ಅವರೇ ಮುಂದಿನ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ವಿಚಾರದಲ್ಲಿ ತಮ್ಮ ಅಥವಾ ಆರ್‍ಎಸ್‍ಎಸ್ ನಾಯಕರ ಯಾವುದೇ ಆಕ್ಷೇಪವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಮತ್ತು ನನ್ನ ಪಕ್ಷ ಮೋದಿ ಜೀ ಅವರ ಬೆನ್ನಿಗೆ ನಿಂತು ಅವರ ಉತ್ತಮ ಕಾರ್ಯಗಳನ್ನು ಬೆಂಬಲಿಸುತ್ತೇವೆ. ನಾನು ಯಾವುದೇ ಲೆಕ್ಕಾಚಾರಗಳನ್ನು ಮಾಡಿಲ್ಲ. ಅಲ್ಲದೇ ಯಾವುದೇ ಟಾರ್ಗೆಟ್ ಕೂಡ ಇಟ್ಟುಕೊಂಡಿಲ್ಲ. ನಾನು ನಾನು ನಂಬಿದ ದಾರಿ ಎಲ್ಲಿ ಕರೆದ್ಯೊಯುತ್ತದೆ ಅಲ್ಲಿಗೆ ಸಾಗುತ್ತೇನೆ. ನನಗೆ ನೀಡಿದ ಜವಾಬ್ದಾರಿಗಳನ್ನು ಮಾತ್ರ ನಿರ್ವಹಿಸುತ್ತೇನೆ ಎಂದಿದ್ದಾರೆ.

ಈ ಹಿಂದೆ ತಾವು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಹೇಳಿದ್ದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತಿನ್ ಗಡ್ಕರಿ, ಈ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂಬ ಅರ್ಥದಲ್ಲಿ ನಾನು ಹೇಳಿದ್ದೆ ಹೊರತು ನಾನೇ ಆ ಹುದ್ದೆಗೆ ಪ್ರಬಲ ಪ್ರತಿಸ್ಪರ್ಧಿ ಎಂಬ ರೀತಿ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದರು.

ಈ ಹಿಂದೆ ಗಡ್ಕರಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಮೆಚ್ಚುಗೆ ಸೂಚಿಸಿ ಬಿಜೆಪಿಯಲ್ಲಿರುವ ಎದೆಗಾರಿಕೆಯ ನಾಯಕ ಎಂದರೆ ಅದು ಗಡ್ಕರಿ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago