Featured

ನಾನು ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ , ದೇಶದ ಅಭಿವೃದ್ಧಿಯೇ ನಮ್ಮ ಮೊದಲ ಆಯ್ಕೆ: ಗಡ್ಕರಿ ಸ್ಪಷ್ಟನೆ – Vishwanews24

ನವದೆಹಲಿ, :2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಬದಲಾಗಿ ನಿತಿನ್ ಗಡ್ಕರಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಸದ್ಯ ಸ್ವತಃ ಗಡ್ಕರಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿಯಾವುವ ಯಾವುದೇ ಆಸೆ ನನಗೆ ಇಲ್ಲ. ನನ್ನ ಮನಸ್ಸಿನಲ್ಲಿ ಹಾಗೂ ಆರ್ ಎಸ್‍ಎಸ್ ನಲ್ಲೂ ಇಂತಹ ಯಾವುದೇ ಚಿಂತನೆ ಇಲ್ಲ. ನಮಗೆ ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ ಆಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಬೇಕೆಂಬುದು ದೇಶದ ನಾಗರಿಕರ ಅಪೇಕ್ಷೆಯಾಗಿದೆ. ಅವರೇ ಮುಂದಿನ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ವಿಚಾರದಲ್ಲಿ ತಮ್ಮ ಅಥವಾ ಆರ್‍ಎಸ್‍ಎಸ್ ನಾಯಕರ ಯಾವುದೇ ಆಕ್ಷೇಪವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಮತ್ತು ನನ್ನ ಪಕ್ಷ ಮೋದಿ ಜೀ ಅವರ ಬೆನ್ನಿಗೆ ನಿಂತು ಅವರ ಉತ್ತಮ ಕಾರ್ಯಗಳನ್ನು ಬೆಂಬಲಿಸುತ್ತೇವೆ. ನಾನು ಯಾವುದೇ ಲೆಕ್ಕಾಚಾರಗಳನ್ನು ಮಾಡಿಲ್ಲ. ಅಲ್ಲದೇ ಯಾವುದೇ ಟಾರ್ಗೆಟ್ ಕೂಡ ಇಟ್ಟುಕೊಂಡಿಲ್ಲ. ನಾನು ನಾನು ನಂಬಿದ ದಾರಿ ಎಲ್ಲಿ ಕರೆದ್ಯೊಯುತ್ತದೆ ಅಲ್ಲಿಗೆ ಸಾಗುತ್ತೇನೆ. ನನಗೆ ನೀಡಿದ ಜವಾಬ್ದಾರಿಗಳನ್ನು ಮಾತ್ರ ನಿರ್ವಹಿಸುತ್ತೇನೆ ಎಂದಿದ್ದಾರೆ.

ಈ ಹಿಂದೆ ತಾವು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಹೇಳಿದ್ದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತಿನ್ ಗಡ್ಕರಿ, ಈ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂಬ ಅರ್ಥದಲ್ಲಿ ನಾನು ಹೇಳಿದ್ದೆ ಹೊರತು ನಾನೇ ಆ ಹುದ್ದೆಗೆ ಪ್ರಬಲ ಪ್ರತಿಸ್ಪರ್ಧಿ ಎಂಬ ರೀತಿ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದರು.

ಈ ಹಿಂದೆ ಗಡ್ಕರಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಮೆಚ್ಚುಗೆ ಸೂಚಿಸಿ ಬಿಜೆಪಿಯಲ್ಲಿರುವ ಎದೆಗಾರಿಕೆಯ ನಾಯಕ ಎಂದರೆ ಅದು ಗಡ್ಕರಿ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

Vishwa News 24

Recent Posts

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

38 minutes ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

1 hour ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

1 hour ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

1 hour ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

2 hours ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

2 hours ago