ಬೆಂಗಳೂರು: ನಟ ಪ್ರಕಾಶ್ ರಾಜ್ ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇಂದು ತಮ್ಮ ಮತ ಚಲಾಯಿಸಿದ್ದಾರೆ.
ನಂತರ ಎಕ್ಸ್ನಲ್ಲಿ ಅವರು ವೀಡಿಯೋ ಸಂದೇಶವನ್ನು ಪೋಸ್ಟ್ ಮಾಡಿ ತಮ್ಮ ಅಬಿಮಾನಿಗಳು ಮತ್ತು ಫಾಲೋವರ್ಸ್ಗೆ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ನಾನು ಬದಲಾವಣೆಗೆ ಮತ ನೀಡಿದ್ದೇನೆ. ನಾನು ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಮತ್ತು ಬದಲಾವಣೆ ತನ್ನಿ. ಎಲ್ಲರನ್ನೂ ಪ್ರೀತಿಸುತ್ತೇನೆ,” ಎಂದು ಅವರು ತಮ್ಮ ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ವೀಡಿಯೋಗೆ ನೀಡಿದ ಶೀರ್ಷಿಕೆಯಲ್ಲಿ ಅವರು “ನಾನು ಮತದಾನ ಮಾಡಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ #ಜಸ್ಟ್ಆಸ್ಕಿಂಗ್#ಸೇವ್ಡೆಮಾಕ್ರೆಸಿಸೇವ್ಇಂಡಿಯಾ” ಎಂದು ಬರೆದಿದ್ದಾರೆ.
ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ ಪ್ರಕಾಶ್ ರಾಜ್ “ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ ದನಿಯಾಗಬೇಕೆಂದು ಆರಿಸುವ ನನ್ನ ಅಧಿಕಾರವಿದು. ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ವಿಭಜನಾತ್ಮಕ ರಾಜಕಾರಣದಿಂದಾಗಿ ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡುವುದು ಅಗತ್ಯ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು ಅವರು ತಂದ ಪ್ರಣಾಳಿಕೆಗೆ ಮತ್ತು ಬದಲಾವಣೆಗೆ ಮತ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…