ಬೆಂಗಳೂರು: ನಟ ಪ್ರಕಾಶ್ ರಾಜ್ ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇಂದು ತಮ್ಮ ಮತ ಚಲಾಯಿಸಿದ್ದಾರೆ.
ನಂತರ ಎಕ್ಸ್ನಲ್ಲಿ ಅವರು ವೀಡಿಯೋ ಸಂದೇಶವನ್ನು ಪೋಸ್ಟ್ ಮಾಡಿ ತಮ್ಮ ಅಬಿಮಾನಿಗಳು ಮತ್ತು ಫಾಲೋವರ್ಸ್ಗೆ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ನಾನು ಬದಲಾವಣೆಗೆ ಮತ ನೀಡಿದ್ದೇನೆ. ನಾನು ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಮತ್ತು ಬದಲಾವಣೆ ತನ್ನಿ. ಎಲ್ಲರನ್ನೂ ಪ್ರೀತಿಸುತ್ತೇನೆ,” ಎಂದು ಅವರು ತಮ್ಮ ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ವೀಡಿಯೋಗೆ ನೀಡಿದ ಶೀರ್ಷಿಕೆಯಲ್ಲಿ ಅವರು “ನಾನು ಮತದಾನ ಮಾಡಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ #ಜಸ್ಟ್ಆಸ್ಕಿಂಗ್#ಸೇವ್ಡೆಮಾಕ್ರೆಸಿಸೇವ್ಇಂಡಿಯಾ” ಎಂದು ಬರೆದಿದ್ದಾರೆ.
ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ ಪ್ರಕಾಶ್ ರಾಜ್ “ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ ದನಿಯಾಗಬೇಕೆಂದು ಆರಿಸುವ ನನ್ನ ಅಧಿಕಾರವಿದು. ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ವಿಭಜನಾತ್ಮಕ ರಾಜಕಾರಣದಿಂದಾಗಿ ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡುವುದು ಅಗತ್ಯ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು ಅವರು ತಂದ ಪ್ರಣಾಳಿಕೆಗೆ ಮತ್ತು ಬದಲಾವಣೆಗೆ ಮತ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…