Featured

ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಹುಬ್ಬಳ್ಳಿ: ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್​. ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ಏಕೀಕರಣ ಆದ ಮೇಲೆ ಯಾವುದೇ ಮುಖ್ಯಮಂತ್ರಿ ರಾಜ್ಯವನ್ನ ಒಡೆದು ಆಳುವ ನೀತಿ ಅನುಸರಿಸಿರಲಿಲ್ಲ. ಅದರೆ, ಕುಮಾರಸ್ವಾಮಿ ಆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಕೆಲಸವನ್ನು ನಾನು ಮಾಡುತ್ತಿದ್ದೇನೆ:
ಬೆಳಗಾವಿಯಲ್ಲಿ ನೂರಾರು ಜನ ಸ್ವಾಮೀಜಿಗಳು ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಸಿಎಂ ಪ್ರತಿಭಟನಾ ಸ್ಥಳಕ್ಕೆ ಬಂದು ಮನವೊಲಿಸುವ ಪ್ರಯತ್ನ ಮಾಡಬೇಕಿತ್ತು. ಆದರೆ, ಆ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಪ್ರತಿಭಟನಾ ಸ್ಥಳಕ್ಕೆ ತೆರಳಿ, ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು.

ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ :
ಇಡೀ ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ. ಬೆಳಕು ನೀಡುವುದು ಕಾರವಾರ. ಬಜೆಟ್​ನಲ್ಲಿ ಆಲಮಟ್ಟಿ ನೀರಾವರಿ ಯೋಜನೆಗೆ ನೈಯಾ ಪೈಸೆ ತೆಗೆದಿಟ್ಟಿಲ್ಲ. ಈ ಹಿಂದೆ ನೀರಾವರಿ ಯೋಜನೆಗೆ ಸಿದ್ದರಾಮಯ್ಯ ಕೂಡ ಅನ್ಯಾಯ ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆ ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಮನಸ್ಸು ಮಾಡಿಲ್ಲ. ಆಲಮಟ್ಟಿ ಉದ್ಯಾನವನವನ್ನ ಅಭಿವೃದ್ಧಿ ಮಾಡಿಲ್ಲ. ಆದರೆ, ಕೆಆರ್‌ಎಸ್ ಅಭಿವೃದ್ಧಿ ಮಾಡಿದ್ದಾರೆ ಎಂದು ಟೀಕಿಸಿದರು.

ಬೆಂಕಿ ಹಚ್ಚುವ ಕೆಲಸ
ಪ್ರತ್ಯೇಕ ರಾಜ್ಯದ ಹಿಂದೆ ಬಿಜೆಪಿ ಕುಮ್ಮಕ್ಕು ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಕೆಂಡಾಮಂಡಲರಾದ ಬಿಎಸ್​ವೈ, ಯಾರೋ ತೆಲೆ ತಿರುಕ ಹೇಳಿದ್ದಾನೆ ಎಂದು ಟಾಂಗ್ ನೀಡಿದರು. ಶ್ರೀರಾಮುಲು, ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯ ಬೇಡಿಕೆ ಇಟ್ಟಿಲ್ಲ. ಬದಲಾಗಿ ಈ ಭಾಗದ ಜನರ ಭಾವನೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಒಡೆದು ಆಳುವುದೇ ಜೆಡಿಎಸ್​ನ ಮುಖ್ಯ ಉದ್ದೇಶವಾಗಿದ್ದು, ಬೆಂಕಿ ಹಚ್ಚುವ ಕೆಲಸವನ್ನು ಅಪ್ಪ ಮಕ್ಕಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago