Featured

ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಹುಬ್ಬಳ್ಳಿ: ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್​. ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ಏಕೀಕರಣ ಆದ ಮೇಲೆ ಯಾವುದೇ ಮುಖ್ಯಮಂತ್ರಿ ರಾಜ್ಯವನ್ನ ಒಡೆದು ಆಳುವ ನೀತಿ ಅನುಸರಿಸಿರಲಿಲ್ಲ. ಅದರೆ, ಕುಮಾರಸ್ವಾಮಿ ಆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಕೆಲಸವನ್ನು ನಾನು ಮಾಡುತ್ತಿದ್ದೇನೆ:
ಬೆಳಗಾವಿಯಲ್ಲಿ ನೂರಾರು ಜನ ಸ್ವಾಮೀಜಿಗಳು ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಸಿಎಂ ಪ್ರತಿಭಟನಾ ಸ್ಥಳಕ್ಕೆ ಬಂದು ಮನವೊಲಿಸುವ ಪ್ರಯತ್ನ ಮಾಡಬೇಕಿತ್ತು. ಆದರೆ, ಆ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಪ್ರತಿಭಟನಾ ಸ್ಥಳಕ್ಕೆ ತೆರಳಿ, ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು.

ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ :
ಇಡೀ ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ. ಬೆಳಕು ನೀಡುವುದು ಕಾರವಾರ. ಬಜೆಟ್​ನಲ್ಲಿ ಆಲಮಟ್ಟಿ ನೀರಾವರಿ ಯೋಜನೆಗೆ ನೈಯಾ ಪೈಸೆ ತೆಗೆದಿಟ್ಟಿಲ್ಲ. ಈ ಹಿಂದೆ ನೀರಾವರಿ ಯೋಜನೆಗೆ ಸಿದ್ದರಾಮಯ್ಯ ಕೂಡ ಅನ್ಯಾಯ ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆ ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಮನಸ್ಸು ಮಾಡಿಲ್ಲ. ಆಲಮಟ್ಟಿ ಉದ್ಯಾನವನವನ್ನ ಅಭಿವೃದ್ಧಿ ಮಾಡಿಲ್ಲ. ಆದರೆ, ಕೆಆರ್‌ಎಸ್ ಅಭಿವೃದ್ಧಿ ಮಾಡಿದ್ದಾರೆ ಎಂದು ಟೀಕಿಸಿದರು.

ಬೆಂಕಿ ಹಚ್ಚುವ ಕೆಲಸ
ಪ್ರತ್ಯೇಕ ರಾಜ್ಯದ ಹಿಂದೆ ಬಿಜೆಪಿ ಕುಮ್ಮಕ್ಕು ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಕೆಂಡಾಮಂಡಲರಾದ ಬಿಎಸ್​ವೈ, ಯಾರೋ ತೆಲೆ ತಿರುಕ ಹೇಳಿದ್ದಾನೆ ಎಂದು ಟಾಂಗ್ ನೀಡಿದರು. ಶ್ರೀರಾಮುಲು, ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯ ಬೇಡಿಕೆ ಇಟ್ಟಿಲ್ಲ. ಬದಲಾಗಿ ಈ ಭಾಗದ ಜನರ ಭಾವನೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಒಡೆದು ಆಳುವುದೇ ಜೆಡಿಎಸ್​ನ ಮುಖ್ಯ ಉದ್ದೇಶವಾಗಿದ್ದು, ಬೆಂಕಿ ಹಚ್ಚುವ ಕೆಲಸವನ್ನು ಅಪ್ಪ ಮಕ್ಕಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago