Featured

ನಾನು ಬಿಜೆಪಿಗೆ ಬಂದು ಅವರ ಮುಲಾಜಿಗೆ ಸಿಲುಕಿ ತಪ್ಪು ಮಾಡಿದೆ ಎನ್ನಿಸುತ್ತಿದೆ : ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ -Vishwanews24

ಬೆಂಗಳೂರು:ನನಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆ ಎಂಬ ನಂಬಿಕೆಯೇ ಹೋಗಿದೆ. ನಾನು ಬಿಜೆಪಿಗೆ ಬಂದು ಅವರ ಮುಲಾಜಿಗೆ ಸಿಲುಕಿ ತಪ್ಪು ಮಾಡಿದೆ ಎನ್ನಿಸುತ್ತಿದೆ ಎಂದು ಮಾಜಿ ಸಚಿವ ಹಾಗೂ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಅವರು, 2008ರಲ್ಲಿ ನನಗೆ ಅನ್ಯಾಯವಾಗಿತ್ತು. ಈ ಬಾರಿ ಅದನ್ನು ಸರಿಪಡಿಸುತ್ತಾರೆ ಎಂಬ ನಂಬಿಕೆ ಇತ್ತು. ಆದರೆ ನನ್ನನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

ನನಗೆ ಯಾವುದೇ ಆಸೆ ಮತ್ತು ನಿರೀಕ್ಷೆಗಳು ಇಲ್ಲದಂತಾಗಿದೆ. ನನಗೆ ಮುಂದಿನ ದಿನಗಳಲ್ಲಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂಬ ನಂಬಿಕೆಯೇ ಉಳಿದಿಲ್ಲ.

ನನ್ನನ್ನು ಸಚಿವ ಸ್ಥಾನದಿಂದ ಕೈಬಿಡಲಾಯಿತು. ನಂತರದ ಬೆಳವಣಿಗೆಗಳಲ್ಲಿ ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿ ಸೇರ್ಪಡೆಯಾದೆ.ಆರ್. ಅಶೋಕ್ ಟಿಕೆಟ್ ಕೊಡಿಸಿದರು. ನಾನು ಒಬ್ಬರನ್ನು ನಂಬಿದ ಮೇಲೆ ಸದಾ ಅವರ ಜೊತೆ ನಿಲ್ಲುತ್ತೇನೆ. ಹಾಗಾಗಿ ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದರು.

ನಾನು ಯಾರಿಗೂ ಹೆದರುವುದಿಲ್ಲ. ಪಕ್ಷ ಬಿಟ್ಟು ಹೋಗುವುದಾದರೆ ಧೈರ್ಯವಾಗಿ ಹೇಳಿಯೇ ಹೋಗುತ್ತೇನೆ. ಯಾರ ಮುಲಾಜಿನಲ್ಲೂ ನಾನು ಬದುಕಿಲ್ಲ. ಕ್ಷೇತ್ರದ ಜನ ನನಗೆ ಊಟ ಹಾಕಿ, ಹಣ ನೀಡಿ ಮತ ಹಾಕಿ ಗೆಲ್ಲಿಸಿದ್ದಾರೆ. ಅವರಿಗಷ್ಟೇ ನಾನು ಹೆದರುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಸಂತೋಷ, ಕೊಡದಿದ್ದರೆ ನನ್ನ ಪಾಡಿಗೆ ನಾನು ಕೆಲಸ ಮಾಡಿಕೊಂಡಿರುತ್ತೇನೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago