ಬಳ್ಳಾರಿ: .ನಾನು ಬಿಜೆಪಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಆದರೆ ಯಾರಿಗೂ ಹೇಳದೆ, ಬೆನ್ನಿಗೆ ಚೂರಿ ಹಾಕಿ ಹೋಗುವುದಿಲ್ಲ. ಕಾರ್ಯಕರ್ತರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಅನಿಲ್ ಲಾಡ್ ಹೇಳಿದ್ದಾರೆ.
ನಾನು ಬಿಜೆಪಿಗೆ ಸೇರುತ್ತಿರುವುದಾಗಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿಳಿಸಿದ್ದೇನೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನೂ ಭೇಟಿ ಮಾಡಿ ವಿಷಯ ತಿಳಿಸುತ್ತೇನೆ. ನನಗೇನೂ ಪಕ್ಷದ ಬಗ್ಗೆ ಅಸಮಾಧಾನ ಇಲ್ಲ. ಹಾಗಂತ ಇಲ್ಲಿರಲು ಆಗುತ್ತಿಲ್ಲ. ಬೇಷರತ್ತಾಗಿ ಬಿಜೆಪಿ ಸೇರುತ್ತಿದ್ದೇನೆ. ಹಣಕ್ಕಾಗಿಯೂ ಪಕ್ಷ ಬದಲಿಸುತ್ತಿಲ್ಲ ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್ನವರು ಯಾರೂ ಮನವೊಲಿಸಲು ಬರುವುದಿಲ್ಲ. ಅಧಿಕಾರ ಬಿಟ್ಟುಕೊಡುವುದಿಲ್ಲ. ಹಾಗಂತ ನಾನು ಬಿಜೆಪಿಗೆ ಸೇರಿದ ತಕ್ಷಣ ನನಗೇನೂ ಸ್ಥಾನಮಾನ ಸಿಗುವುದಿಲ್ಲ. ಆದರೆ ಇನ್ನು ಅಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಶ್ರೀರಾಮುಲು ಹಾಗೂ ಆನಂದ್ ಸಿಂಗ್ ಜತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಮೊಳಕಾಲ್ಮೂರು ಸಂಸದ ಮತ್ತು ಸಚಿವ ಬಿ. ಶ್ರೀರಾಮುಲು ಜೊತೆ ಈ ಕುರಿತು ಅನಿಲ್ ಲಾಡ್ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲು ಅನಿಲ್ ಲಾಡ್ ಪ್ರಯತ್ನ ನಡೆಸುತ್ತಿದ್ದಾರೆ. ಯಡಿಯೂರಪ್ಪ ಒಪ್ಪಿಗೆ ಪಡೆದ ಬಳಿಕ ಬಿಜೆಪಿ ಸೇರುವ ಕುರಿತು ಅವರು ಅಧಿಕೃತ ಘೋಷಣೆ ಮಾಡುವ ನಿರೀಕ್ಷೆ ಇದೆ.
ಅನಿಲ್ ಲಾಡ್ ಕಾಂಗ್ರೆಸ್ನಿಂದ ಎರಡುಬಾರಿ ಶಾಸಕರಾಗಿದ್ದವರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…