ಕಲಬುರಗಿ- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ ವಿರುದ್ದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಎಚ್ಚರಿಸಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇಪದೇ ಮಾರಾಟವಾಗಿದ್ದೀರಾ ಎಂದು ಆರೋಪ ಮಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ತುಂಬಾ ಬಲಿಷ್ಠರಿದ್ದಾರೆ, ಪವರ್ಫುಲ್ ಆನ್ ದಿ ಅರ್ಥ್. ದಿ ಗ್ರೇಟ್ ಲೀಡರ್ ಮಲ್ಲಿಕಾರ್ಜುನ ಖರ್ಗೆ ಅವರು, ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ.
ಜಗತ್ತಿನ ಯಾವುದೇ ಏಜೆನ್ಸಿ ಮೂಲಕ ತನಿಖೆ ಮಾಡಿಸಿ, ದುಡ್ಡು ಪಡೆದದ್ದು ಸಾಬೀತು ಮಾಡಿದರೆ, , ರಾಜಕೀಯ ನಿವೃತ್ತಿ ಪಡೆಯುವೆ. ಪದೇ ಪದೇ ಮಾರಾಟವಾಗಿದ್ದೀರ? ಎಂದು ಹೇಳಿಕೆ ಕೊಟ್ಟರೆ, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಹಣ ಬಲ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತು.
ಮಲ್ಲಿಕಾರ್ಜುನ ಖರ್ಗೆ ಕಾಲಿಗೆ ಬಿದ್ದು ಸುಭಾಷ್ ರಾಠೋಡ್ ಚಿಂಚೋಳಿ ಟಿಕೆಟ್ ಪಡೆದಿದ್ದಾನೆ. ಆತ ಖರ್ಗೆಗೆ ನಿಷ್ಟವಂತಾನೇ ಹೊರೆತು ಬೇರೆಯವರಿಗಲ್ಲ. ಇಟ್ ಈಸ್ ಫೈಟ್ ಬಿಟ್ವಿನ್ ಪ್ರಿಯಾಂಕ್ ಖರ್ಗೆ ಜಾಧವ್, ನಾಟ್ ಸುಭಾಷ್ ರಾಠೋಡ್. ಅವರು ಚುನಾವಣೆಯನ್ನು ವೈಯಕ್ತಿಕವಾಗಿ ತಗೆದುಕೊಂಡರೆ ನಾವು ನೋಡುತ್ತೇವೆ ಎಂದು ಹರಿಹಾಯ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…