ಕಲಬುರಗಿ- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ ವಿರುದ್ದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಎಚ್ಚರಿಸಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇಪದೇ ಮಾರಾಟವಾಗಿದ್ದೀರಾ ಎಂದು ಆರೋಪ ಮಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ತುಂಬಾ ಬಲಿಷ್ಠರಿದ್ದಾರೆ, ಪವರ್ಫುಲ್ ಆನ್ ದಿ ಅರ್ಥ್. ದಿ ಗ್ರೇಟ್ ಲೀಡರ್ ಮಲ್ಲಿಕಾರ್ಜುನ ಖರ್ಗೆ ಅವರು, ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ.
ಜಗತ್ತಿನ ಯಾವುದೇ ಏಜೆನ್ಸಿ ಮೂಲಕ ತನಿಖೆ ಮಾಡಿಸಿ, ದುಡ್ಡು ಪಡೆದದ್ದು ಸಾಬೀತು ಮಾಡಿದರೆ, , ರಾಜಕೀಯ ನಿವೃತ್ತಿ ಪಡೆಯುವೆ. ಪದೇ ಪದೇ ಮಾರಾಟವಾಗಿದ್ದೀರ? ಎಂದು ಹೇಳಿಕೆ ಕೊಟ್ಟರೆ, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಹಣ ಬಲ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತು.
ಮಲ್ಲಿಕಾರ್ಜುನ ಖರ್ಗೆ ಕಾಲಿಗೆ ಬಿದ್ದು ಸುಭಾಷ್ ರಾಠೋಡ್ ಚಿಂಚೋಳಿ ಟಿಕೆಟ್ ಪಡೆದಿದ್ದಾನೆ. ಆತ ಖರ್ಗೆಗೆ ನಿಷ್ಟವಂತಾನೇ ಹೊರೆತು ಬೇರೆಯವರಿಗಲ್ಲ. ಇಟ್ ಈಸ್ ಫೈಟ್ ಬಿಟ್ವಿನ್ ಪ್ರಿಯಾಂಕ್ ಖರ್ಗೆ ಜಾಧವ್, ನಾಟ್ ಸುಭಾಷ್ ರಾಠೋಡ್. ಅವರು ಚುನಾವಣೆಯನ್ನು ವೈಯಕ್ತಿಕವಾಗಿ ತಗೆದುಕೊಂಡರೆ ನಾವು ನೋಡುತ್ತೇವೆ ಎಂದು ಹರಿಹಾಯ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…