ಕಲಬುರಗಿ- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ ವಿರುದ್ದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಎಚ್ಚರಿಸಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇಪದೇ ಮಾರಾಟವಾಗಿದ್ದೀರಾ ಎಂದು ಆರೋಪ ಮಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ತುಂಬಾ ಬಲಿಷ್ಠರಿದ್ದಾರೆ, ಪವರ್ಫುಲ್ ಆನ್ ದಿ ಅರ್ಥ್. ದಿ ಗ್ರೇಟ್ ಲೀಡರ್ ಮಲ್ಲಿಕಾರ್ಜುನ ಖರ್ಗೆ ಅವರು, ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ.
ಜಗತ್ತಿನ ಯಾವುದೇ ಏಜೆನ್ಸಿ ಮೂಲಕ ತನಿಖೆ ಮಾಡಿಸಿ, ದುಡ್ಡು ಪಡೆದದ್ದು ಸಾಬೀತು ಮಾಡಿದರೆ, , ರಾಜಕೀಯ ನಿವೃತ್ತಿ ಪಡೆಯುವೆ. ಪದೇ ಪದೇ ಮಾರಾಟವಾಗಿದ್ದೀರ? ಎಂದು ಹೇಳಿಕೆ ಕೊಟ್ಟರೆ, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಹಣ ಬಲ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತು.
ಮಲ್ಲಿಕಾರ್ಜುನ ಖರ್ಗೆ ಕಾಲಿಗೆ ಬಿದ್ದು ಸುಭಾಷ್ ರಾಠೋಡ್ ಚಿಂಚೋಳಿ ಟಿಕೆಟ್ ಪಡೆದಿದ್ದಾನೆ. ಆತ ಖರ್ಗೆಗೆ ನಿಷ್ಟವಂತಾನೇ ಹೊರೆತು ಬೇರೆಯವರಿಗಲ್ಲ. ಇಟ್ ಈಸ್ ಫೈಟ್ ಬಿಟ್ವಿನ್ ಪ್ರಿಯಾಂಕ್ ಖರ್ಗೆ ಜಾಧವ್, ನಾಟ್ ಸುಭಾಷ್ ರಾಠೋಡ್. ಅವರು ಚುನಾವಣೆಯನ್ನು ವೈಯಕ್ತಿಕವಾಗಿ ತಗೆದುಕೊಂಡರೆ ನಾವು ನೋಡುತ್ತೇವೆ ಎಂದು ಹರಿಹಾಯ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…