Featured

ನಾನು ಬಿಜೆಪಿ ಸೇರಲು ಪ್ರಧಾನಿ ಮೋದಿ ಅವರ ನಾಯಕತ್ವವೇ ಮೂಲ ಕಾರಣ :ಎಸ್‌.ಎಂ ಕೃಷ್ಣ – Vishwanews24

ಬೆಂಗಳೂರು: ತಾವು ಬಹಳ ಯೋಚಿಸಿಯೇ ಬಿಜೆಪಿ ಸೇರುವ ದೃಢ ನಿರ್ಧಾರ ಮಾಡಿದ್ದಾಗಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎಸ್‌.ಎಂ ಕೃಷ್ಣ ತಿಳಿಸಿದರು. ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವರದಿಗಾರರ ಕೂಟ ಆಯೋಜಿಸಿದ್ದ ಮಾತು-ಮಂಥನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಹಲವು ವಿಚಾರಗಳನ್ನು ತೆರೆದಿಟ್ಟರು.

ಅನುವಂಶೀಯ ರಾಜಕೀಯವನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ನಿರ್ಧಾರ ಕೈಗೊಂಡೆ. ನಾನು ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಮೂಲ ಕಾರಣ ಎಂದು ಕೃಷ್ಣ ತಿಳಿಸಿದರು.

ಬಿಜೆಪಿಯಲ್ಲಿ ಅರ್ಹತೆ ಇದ್ದವರನ್ನೇ ನಾಯಕರಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಗುಜರಾತ್‌ನಲ್ಲಿ ಯಶಸ್ವಿಯಾಗಿ 3 ಅವಧಿಗೆ ಮುಖ್ಯಮಂತ್ರಿಯಾಗಿ ಮೋದಿಯವರು ದೇಶಕ್ಕೇ ಮಾದರಿಯಾಗುವಂತೆ ಆ ರಾಜ್ಯವನ್ನು ಅಭಿವೃದ್ಧಿಪಡಿಸಿದರು. ನಂತರ ದಿಲ್ಲಿಯ ರಾಜಕಾರಣಕ್ಕೆ ಪ್ರವೇಶಿಸಿ ಪ್ರಧಾನಿಯಾಗಿ ಭಾರತದ ಭವಿಷ್ಯಕ್ಕೆ ಮಹತ್ವದ ತಿರುವು ನೀಡಿದ್ದಾರೆ. ಅವರಿಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ. ಅವರ ಆ ಗುಣವನ್ನೇ ನಾನು ಮೆಚ್ಚಿಕೊಂಡು ಅನುಸರಿಸಿದೆ. ಮತ್ತೆ ಮೋದಿಯವರೇ ಈ ದೇಶದ ನಾಯಕತ್ವವನ್ನು ಮುಂದುವರಿಸಬೇಕು ಎಂಬುದು ನನ್ನ ಬಯಕೆ’ ಎಂದು ಎಸ್‌.ಎಂ ಕೃಷ್ಣ ಮನದಾಳವನ್ನು ತೆರೆದಿಟ್ಟರು.

ಐದು ವರ್ಷಗಳ ನಿಷ್ಕಳಂಕ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತ ನೀಡಿದ ಮೋದಿಯವರು ದೇಶವನ್ನು ಸದ್ಯ ಒಂದು ರಸ್ತೆಗೆ ತಂದು ಬಿಟ್ಟಿದ್ದಾರೆ. ಇದೇ ಹಾದಿಯಲ್ಲಿ ದೇಶ ಮುಂದುವರಿಯಬೇಕು. ದೇಶದಲ್ಲಿ ಆರ್ಥಿಕವಾಗಿ ಬಹಳಷ್ಟು ಅಭಿವೃದ್ಧಿಯಾಗಿದೆ. ಕಳೆದ ಐದು ವರ್ಷದಿಂದ ಸಾಕಷ್ಟು ಬದಲಾವಣೆಯೂ ಆಗಿದೆ. ಇದಕ್ಕೆಲ್ಲ ಕಾರಣ ನರೇಂದ್ರ ಮೋದಿಯವರು. ಹೀಗಾಗಿಯೇ ಇನ್ನೂ 5 ವರ್ಷ ಅವರು ನಮ್ಮ ದೇಶವನ್ನು ಮುನ್ನಡೆಸಬೇಕು ಅನ್ನೋದು ನನ್ನ ಬಯಕೆ ಎಂದು ಕೃಷ್ಣ ತಿಳಿಸಿದರು.

ವಂಶಪಾರಂಪರ್ಯ ರಾಜಕೀಯ ನನಗೆ ಇಷ್ಟ ಆಗಲಿಲ್ಲ. ಅದರಿಂದ ನಾನು ಕಾಂಗ್ರೆಸ್ ಪಕ್ಷ ಬಿಡಬೇಕಾಯ್ತು. ಕಾಂಗ್ರೆಸ್‌ನಲ್ಲಿ ಇತ್ತೀಚಿನ ಬೆಳವಣಿಗೆ ನನಗೆ ಇಷ್ಟವಾಗಲಿಲ್ಲ. ಇದರಿಂದ ನಾನು ಕಾಂಗ್ರೆಸ್‌ನಲ್ಲಿ ಉಳಿದು ಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ 40 ವರ್ಷಗಳ ಕಾಲದ ಸಂಬಂಧವನ್ನು ಮುರಿದು‌ ಬಿಜೆಪಿಗೆ ಬಂದೆ.

‘ನಾನು ಬಿಜೆಪಿ ಸೇರಿದ ನಂತರ ನನ್ನ ಅಳಿಯ ಸಿದ್ದಾರ್ಥ ಮೇಲೆ ಐಟಿ ದಾಳಿ ಆಯ್ತು. ಇದು ನನಗೆ ಬಿಜೆಪಿ ಕೊಟ್ಟ ಬಳುವಳಿ. ಆದರೆ ಐಟಿ ದಾಳಿಗೂ ರಾಜಕಾರಣಕ್ಕೂ ಸಂಬಂಧ ಬೆರೆಸುವುದು ಸೂಕ್ತವಲ್ಲ’ ಎಂದು ಅವರು ಪ್ರತಿಪಾದಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago