Featured

ನಾನು ಬಿಜೆಪಿ ಸೇರಲು ಪ್ರಧಾನಿ ಮೋದಿ ಅವರ ನಾಯಕತ್ವವೇ ಮೂಲ ಕಾರಣ :ಎಸ್‌.ಎಂ ಕೃಷ್ಣ – Vishwanews24

ಬೆಂಗಳೂರು: ತಾವು ಬಹಳ ಯೋಚಿಸಿಯೇ ಬಿಜೆಪಿ ಸೇರುವ ದೃಢ ನಿರ್ಧಾರ ಮಾಡಿದ್ದಾಗಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎಸ್‌.ಎಂ ಕೃಷ್ಣ ತಿಳಿಸಿದರು. ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವರದಿಗಾರರ ಕೂಟ ಆಯೋಜಿಸಿದ್ದ ಮಾತು-ಮಂಥನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಹಲವು ವಿಚಾರಗಳನ್ನು ತೆರೆದಿಟ್ಟರು.

ಅನುವಂಶೀಯ ರಾಜಕೀಯವನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ನಿರ್ಧಾರ ಕೈಗೊಂಡೆ. ನಾನು ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಮೂಲ ಕಾರಣ ಎಂದು ಕೃಷ್ಣ ತಿಳಿಸಿದರು.

ಬಿಜೆಪಿಯಲ್ಲಿ ಅರ್ಹತೆ ಇದ್ದವರನ್ನೇ ನಾಯಕರಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಗುಜರಾತ್‌ನಲ್ಲಿ ಯಶಸ್ವಿಯಾಗಿ 3 ಅವಧಿಗೆ ಮುಖ್ಯಮಂತ್ರಿಯಾಗಿ ಮೋದಿಯವರು ದೇಶಕ್ಕೇ ಮಾದರಿಯಾಗುವಂತೆ ಆ ರಾಜ್ಯವನ್ನು ಅಭಿವೃದ್ಧಿಪಡಿಸಿದರು. ನಂತರ ದಿಲ್ಲಿಯ ರಾಜಕಾರಣಕ್ಕೆ ಪ್ರವೇಶಿಸಿ ಪ್ರಧಾನಿಯಾಗಿ ಭಾರತದ ಭವಿಷ್ಯಕ್ಕೆ ಮಹತ್ವದ ತಿರುವು ನೀಡಿದ್ದಾರೆ. ಅವರಿಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ. ಅವರ ಆ ಗುಣವನ್ನೇ ನಾನು ಮೆಚ್ಚಿಕೊಂಡು ಅನುಸರಿಸಿದೆ. ಮತ್ತೆ ಮೋದಿಯವರೇ ಈ ದೇಶದ ನಾಯಕತ್ವವನ್ನು ಮುಂದುವರಿಸಬೇಕು ಎಂಬುದು ನನ್ನ ಬಯಕೆ’ ಎಂದು ಎಸ್‌.ಎಂ ಕೃಷ್ಣ ಮನದಾಳವನ್ನು ತೆರೆದಿಟ್ಟರು.

ಐದು ವರ್ಷಗಳ ನಿಷ್ಕಳಂಕ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತ ನೀಡಿದ ಮೋದಿಯವರು ದೇಶವನ್ನು ಸದ್ಯ ಒಂದು ರಸ್ತೆಗೆ ತಂದು ಬಿಟ್ಟಿದ್ದಾರೆ. ಇದೇ ಹಾದಿಯಲ್ಲಿ ದೇಶ ಮುಂದುವರಿಯಬೇಕು. ದೇಶದಲ್ಲಿ ಆರ್ಥಿಕವಾಗಿ ಬಹಳಷ್ಟು ಅಭಿವೃದ್ಧಿಯಾಗಿದೆ. ಕಳೆದ ಐದು ವರ್ಷದಿಂದ ಸಾಕಷ್ಟು ಬದಲಾವಣೆಯೂ ಆಗಿದೆ. ಇದಕ್ಕೆಲ್ಲ ಕಾರಣ ನರೇಂದ್ರ ಮೋದಿಯವರು. ಹೀಗಾಗಿಯೇ ಇನ್ನೂ 5 ವರ್ಷ ಅವರು ನಮ್ಮ ದೇಶವನ್ನು ಮುನ್ನಡೆಸಬೇಕು ಅನ್ನೋದು ನನ್ನ ಬಯಕೆ ಎಂದು ಕೃಷ್ಣ ತಿಳಿಸಿದರು.

ವಂಶಪಾರಂಪರ್ಯ ರಾಜಕೀಯ ನನಗೆ ಇಷ್ಟ ಆಗಲಿಲ್ಲ. ಅದರಿಂದ ನಾನು ಕಾಂಗ್ರೆಸ್ ಪಕ್ಷ ಬಿಡಬೇಕಾಯ್ತು. ಕಾಂಗ್ರೆಸ್‌ನಲ್ಲಿ ಇತ್ತೀಚಿನ ಬೆಳವಣಿಗೆ ನನಗೆ ಇಷ್ಟವಾಗಲಿಲ್ಲ. ಇದರಿಂದ ನಾನು ಕಾಂಗ್ರೆಸ್‌ನಲ್ಲಿ ಉಳಿದು ಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ 40 ವರ್ಷಗಳ ಕಾಲದ ಸಂಬಂಧವನ್ನು ಮುರಿದು‌ ಬಿಜೆಪಿಗೆ ಬಂದೆ.

‘ನಾನು ಬಿಜೆಪಿ ಸೇರಿದ ನಂತರ ನನ್ನ ಅಳಿಯ ಸಿದ್ದಾರ್ಥ ಮೇಲೆ ಐಟಿ ದಾಳಿ ಆಯ್ತು. ಇದು ನನಗೆ ಬಿಜೆಪಿ ಕೊಟ್ಟ ಬಳುವಳಿ. ಆದರೆ ಐಟಿ ದಾಳಿಗೂ ರಾಜಕಾರಣಕ್ಕೂ ಸಂಬಂಧ ಬೆರೆಸುವುದು ಸೂಕ್ತವಲ್ಲ’ ಎಂದು ಅವರು ಪ್ರತಿಪಾದಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago