Featured

ನಾನು ಬಿಜೆಪಿ ಸೇರಲು ಪ್ರಧಾನಿ ಮೋದಿ ಅವರ ನಾಯಕತ್ವವೇ ಮೂಲ ಕಾರಣ :ಎಸ್‌.ಎಂ ಕೃಷ್ಣ – Vishwanews24

ಬೆಂಗಳೂರು: ತಾವು ಬಹಳ ಯೋಚಿಸಿಯೇ ಬಿಜೆಪಿ ಸೇರುವ ದೃಢ ನಿರ್ಧಾರ ಮಾಡಿದ್ದಾಗಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎಸ್‌.ಎಂ ಕೃಷ್ಣ ತಿಳಿಸಿದರು. ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವರದಿಗಾರರ ಕೂಟ ಆಯೋಜಿಸಿದ್ದ ಮಾತು-ಮಂಥನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಹಲವು ವಿಚಾರಗಳನ್ನು ತೆರೆದಿಟ್ಟರು.

ಅನುವಂಶೀಯ ರಾಜಕೀಯವನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ನಿರ್ಧಾರ ಕೈಗೊಂಡೆ. ನಾನು ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಮೂಲ ಕಾರಣ ಎಂದು ಕೃಷ್ಣ ತಿಳಿಸಿದರು.

ಬಿಜೆಪಿಯಲ್ಲಿ ಅರ್ಹತೆ ಇದ್ದವರನ್ನೇ ನಾಯಕರಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಗುಜರಾತ್‌ನಲ್ಲಿ ಯಶಸ್ವಿಯಾಗಿ 3 ಅವಧಿಗೆ ಮುಖ್ಯಮಂತ್ರಿಯಾಗಿ ಮೋದಿಯವರು ದೇಶಕ್ಕೇ ಮಾದರಿಯಾಗುವಂತೆ ಆ ರಾಜ್ಯವನ್ನು ಅಭಿವೃದ್ಧಿಪಡಿಸಿದರು. ನಂತರ ದಿಲ್ಲಿಯ ರಾಜಕಾರಣಕ್ಕೆ ಪ್ರವೇಶಿಸಿ ಪ್ರಧಾನಿಯಾಗಿ ಭಾರತದ ಭವಿಷ್ಯಕ್ಕೆ ಮಹತ್ವದ ತಿರುವು ನೀಡಿದ್ದಾರೆ. ಅವರಿಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ. ಅವರ ಆ ಗುಣವನ್ನೇ ನಾನು ಮೆಚ್ಚಿಕೊಂಡು ಅನುಸರಿಸಿದೆ. ಮತ್ತೆ ಮೋದಿಯವರೇ ಈ ದೇಶದ ನಾಯಕತ್ವವನ್ನು ಮುಂದುವರಿಸಬೇಕು ಎಂಬುದು ನನ್ನ ಬಯಕೆ’ ಎಂದು ಎಸ್‌.ಎಂ ಕೃಷ್ಣ ಮನದಾಳವನ್ನು ತೆರೆದಿಟ್ಟರು.

ಐದು ವರ್ಷಗಳ ನಿಷ್ಕಳಂಕ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತ ನೀಡಿದ ಮೋದಿಯವರು ದೇಶವನ್ನು ಸದ್ಯ ಒಂದು ರಸ್ತೆಗೆ ತಂದು ಬಿಟ್ಟಿದ್ದಾರೆ. ಇದೇ ಹಾದಿಯಲ್ಲಿ ದೇಶ ಮುಂದುವರಿಯಬೇಕು. ದೇಶದಲ್ಲಿ ಆರ್ಥಿಕವಾಗಿ ಬಹಳಷ್ಟು ಅಭಿವೃದ್ಧಿಯಾಗಿದೆ. ಕಳೆದ ಐದು ವರ್ಷದಿಂದ ಸಾಕಷ್ಟು ಬದಲಾವಣೆಯೂ ಆಗಿದೆ. ಇದಕ್ಕೆಲ್ಲ ಕಾರಣ ನರೇಂದ್ರ ಮೋದಿಯವರು. ಹೀಗಾಗಿಯೇ ಇನ್ನೂ 5 ವರ್ಷ ಅವರು ನಮ್ಮ ದೇಶವನ್ನು ಮುನ್ನಡೆಸಬೇಕು ಅನ್ನೋದು ನನ್ನ ಬಯಕೆ ಎಂದು ಕೃಷ್ಣ ತಿಳಿಸಿದರು.

ವಂಶಪಾರಂಪರ್ಯ ರಾಜಕೀಯ ನನಗೆ ಇಷ್ಟ ಆಗಲಿಲ್ಲ. ಅದರಿಂದ ನಾನು ಕಾಂಗ್ರೆಸ್ ಪಕ್ಷ ಬಿಡಬೇಕಾಯ್ತು. ಕಾಂಗ್ರೆಸ್‌ನಲ್ಲಿ ಇತ್ತೀಚಿನ ಬೆಳವಣಿಗೆ ನನಗೆ ಇಷ್ಟವಾಗಲಿಲ್ಲ. ಇದರಿಂದ ನಾನು ಕಾಂಗ್ರೆಸ್‌ನಲ್ಲಿ ಉಳಿದು ಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ 40 ವರ್ಷಗಳ ಕಾಲದ ಸಂಬಂಧವನ್ನು ಮುರಿದು‌ ಬಿಜೆಪಿಗೆ ಬಂದೆ.

‘ನಾನು ಬಿಜೆಪಿ ಸೇರಿದ ನಂತರ ನನ್ನ ಅಳಿಯ ಸಿದ್ದಾರ್ಥ ಮೇಲೆ ಐಟಿ ದಾಳಿ ಆಯ್ತು. ಇದು ನನಗೆ ಬಿಜೆಪಿ ಕೊಟ್ಟ ಬಳುವಳಿ. ಆದರೆ ಐಟಿ ದಾಳಿಗೂ ರಾಜಕಾರಣಕ್ಕೂ ಸಂಬಂಧ ಬೆರೆಸುವುದು ಸೂಕ್ತವಲ್ಲ’ ಎಂದು ಅವರು ಪ್ರತಿಪಾದಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

16 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago