ಮಂಡ್ಯ: ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ವಿಚಾರ ಇಲ್ಲ. ಫ್ಲೆಕ್ಸ್ ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಚ್ಚಿದಾನಂದ ಗೆ ನನ್ನ ಬೆಂಬಲ ಇದೆ ಎನ್ನುವುದು ಸೀಕ್ರೆಟ್ ಇಲ್ಲ ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎಂದು ಓಪನ್ ಆಗಿ ಘೋಷಣೆ ಮಾಡಿದ್ದೇನೆ. ಹೀಗಾಗಿ ಸಚ್ಚಿ ಬ್ಯಾನರ್ ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ ಎಂದರು.
ಪಕ್ಷ ಸೇರ್ಪಡೆಯ ಬಗ್ಗೆ ನಾನು ಯಾವುದೇ ಸಭೆ ಮಾಡುತ್ತಿಲ್ಲ, ನಾನು ಹೋದ ಕಡೆ ಜನರನ್ನು ಪಕ್ಷ ಸೇರ್ಪಡೆ ಬಗ್ಗೆ ಕೇಳ್ತಾ ಇದ್ದೀನಿ. ಜನರು ಸಹ ಈ ಬಗ್ಗೆ ಕೇಳ್ತಾ ಇದ್ದಾರೆ. ಜನರು ಸಹ ಸದ್ಯಕ್ಕೆ ಹೀಗೆ ಇರಿ ಎಂದು ಹೇಳುತ್ತಾ ಇದ್ದಾರೆ. ನಾನು ಯಾವುದೇ ನಿರ್ಧಾರ ಮಾಡಲ್ಲ, ಜನರು ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರ ಮಾಡ್ತಾರೆ. ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡ್ತೀನಿ. ಯೋಗೇಶ್ವರ್ ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ ಅದೇ ರೀತಿ ಹಲವು ನಾಯಕರು ನನ್ನನ್ನು ಮಾತಾಡಿಸಿದ್ದಾರೆ. ಇಲ್ಲಿಯವರೆಗೆ ನಾನು ಆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…