ಬೆಂಗಳೂರು: ಕೆಲವು ದಿನಗಳ ಹಿಂದೆ ಚುನಾವಣಾ ರಾಜಕೀಯದಿಂದ ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.
ಬಳಿಕ ಬಿಜೆಪಿ ಕೆಲ ನಾಯಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಅದರಂತೆ ನಾನು ನಿವೃತ್ತಿ ಘೋಷಣೆಯನ್ನ ಹಿಂಪಡೆಯುತ್ತೇನೆ ಎಂದಿದ್ದರು. ಇದೀಗ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿಅಚ್ಚರಿ ಹೇಳಿಕೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು, ಮುಖಂಡರು ನೀವೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ರೆ, ಸ್ವಲ್ಪ ನೋವಾಗುತ್ತದೆ. ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…