Featured

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​ – Vishwanews24

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​

ಲಂಡನ್​: ಬ್ರಿಟನ್​ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯ ನಾಲ್ಕನೇ ಸುತ್ತಿನಲ್ಲೂ ರಿಷಿ ಸುನಕ್​ ಮುನ್ನಡೆ ಸಾಧಿಸಿದ್ದು, ಅಂತಿಮ ಸುತ್ತಿನತ್ತ ದಾಪುಗಾಲಿಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಿಷಿ ಸುನಕ್​ ಅವರು ಮಹತ್ವದ ಶಪಥ ಮಾಡಿದ್ದಾರೆ.

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.

ಪ್ರಧಾನಿ ಬೋರಿಸ್​ ಜಾನ್ಸನ್​​ರ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ರೇಸ್​ನಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವರೂ ಆದ ಇನ್ಫೋಸಿಸ್​ ಸಹ ಸಂಸ್ಥಾಪಕ ಎನ್.ಆರ್​. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಮುಂಚೂಣಿಯಲ್ಲಿದ್ದಾರೆ. ಅಂತಿಮ ಸುತ್ತಿಗೆ ಇಬ್ಬರು ಸ್ಪರ್ಧಿಗಳು ತೆರಳಿದ್ದು, ಸದ್ಯದ ಮಾಹಿತಿ ಪ್ರಕಾರ ಇವರ ಆಯ್ಕೆ ಬಹುತೇಕ ಖಚಿತವಾಗಿದೆ. ಆಡಳಿತಾರೂಢ ಕನ್ಸರ್ವೇಟಿವ್​ ಪಕ್ಷದಲ್ಲಿ ರಿಷಿ ಸುನಕ್​ ಅವರಿಗೆ ಒಳ್ಳೆಯ ಹೆಸರಿದೆ.

‘ಬ್ರಿಟನ್​-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನ ಹೊಂದಿರುವ ಏಕೈಕ ಅಭ್ಯರ್ಥಿ ರಿಷಿ ಸುನಕ್’​ ಎಂದು ಚೀನಾದ ಗ್ಲೋಬಲ್​ ಟೈಮ್ಸ್​ ಹೇಳಿತ್ತು. ಇನ್ನು ಚೀನಾ ಮತ್ತು ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲರಾಗಿದ್ದಾರೆ ಎಂದು ಅವರ ಪ್ರತಿಸ್ಪರ್ಧಿ ಲಿಜ್​ ಟ್ರುಸ್​ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಿಷಿ ಸುನಕ್, ‘ಚೀನಾದ ಸಂಸ್ಕೃತಿ ಮತ್ತು ಭಾಷಾ ಕಾರ್ಯಕ್ರಮಗಳ ಮೂಲಕ ಚೀನಿ ಪ್ರಭಾವ ಹೆಚ್ಚಾಗದಂತೆ ತಡೆಯಲು ಬ್ರಿಟನ್​ನಲ್ಲಿರುವ ಎಲ್ಲ 30 ಕನ್ಫ್ಯೂಷಿಯಸ್ ​ಸಂಸ್ಥೆಗಳನ್ನು ಮುಚ್ಚುವೆ. ಚೀನಿ ಕಮ್ಯುನಿಷ್ಟ್​ ಪಕ್ಷವನ್ನ ನಮ್ಮ ವಿಶ್ವವಿದ್ಯಾಲಯದಗಳಿಂದ ಹೊರಹಾಕಲಾಗವುದು. ಚೀನಿ ಬೇಹಗಾರಿಕೆ ಎದುರಿಸಲು ಬ್ರಿಟನ್​ ದೇಶೀಯ ಬೇಹುಗಾರಿಕೆ ಸಂಸ್ಥೆ ಎಂಐ5 ಅನ್ನು ಬಳಸಲಾಗವುದು. ಬ್ರಿಟೀಷ್​ ಸ್ವತ್ತುಗಳನ್ನು ಚೀನಿಯರ ಸ್ವಾಧೀನಕ್ಕೆ ಹೋಗದಂತೆ ಎಚ್ಚರ ವಹಿಸಲಾಗುವುದು’ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago