Featured

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​ – Vishwanews24

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​

ಲಂಡನ್​: ಬ್ರಿಟನ್​ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯ ನಾಲ್ಕನೇ ಸುತ್ತಿನಲ್ಲೂ ರಿಷಿ ಸುನಕ್​ ಮುನ್ನಡೆ ಸಾಧಿಸಿದ್ದು, ಅಂತಿಮ ಸುತ್ತಿನತ್ತ ದಾಪುಗಾಲಿಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಿಷಿ ಸುನಕ್​ ಅವರು ಮಹತ್ವದ ಶಪಥ ಮಾಡಿದ್ದಾರೆ.

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.

ಪ್ರಧಾನಿ ಬೋರಿಸ್​ ಜಾನ್ಸನ್​​ರ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ರೇಸ್​ನಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವರೂ ಆದ ಇನ್ಫೋಸಿಸ್​ ಸಹ ಸಂಸ್ಥಾಪಕ ಎನ್.ಆರ್​. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಮುಂಚೂಣಿಯಲ್ಲಿದ್ದಾರೆ. ಅಂತಿಮ ಸುತ್ತಿಗೆ ಇಬ್ಬರು ಸ್ಪರ್ಧಿಗಳು ತೆರಳಿದ್ದು, ಸದ್ಯದ ಮಾಹಿತಿ ಪ್ರಕಾರ ಇವರ ಆಯ್ಕೆ ಬಹುತೇಕ ಖಚಿತವಾಗಿದೆ. ಆಡಳಿತಾರೂಢ ಕನ್ಸರ್ವೇಟಿವ್​ ಪಕ್ಷದಲ್ಲಿ ರಿಷಿ ಸುನಕ್​ ಅವರಿಗೆ ಒಳ್ಳೆಯ ಹೆಸರಿದೆ.

‘ಬ್ರಿಟನ್​-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನ ಹೊಂದಿರುವ ಏಕೈಕ ಅಭ್ಯರ್ಥಿ ರಿಷಿ ಸುನಕ್’​ ಎಂದು ಚೀನಾದ ಗ್ಲೋಬಲ್​ ಟೈಮ್ಸ್​ ಹೇಳಿತ್ತು. ಇನ್ನು ಚೀನಾ ಮತ್ತು ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲರಾಗಿದ್ದಾರೆ ಎಂದು ಅವರ ಪ್ರತಿಸ್ಪರ್ಧಿ ಲಿಜ್​ ಟ್ರುಸ್​ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಿಷಿ ಸುನಕ್, ‘ಚೀನಾದ ಸಂಸ್ಕೃತಿ ಮತ್ತು ಭಾಷಾ ಕಾರ್ಯಕ್ರಮಗಳ ಮೂಲಕ ಚೀನಿ ಪ್ರಭಾವ ಹೆಚ್ಚಾಗದಂತೆ ತಡೆಯಲು ಬ್ರಿಟನ್​ನಲ್ಲಿರುವ ಎಲ್ಲ 30 ಕನ್ಫ್ಯೂಷಿಯಸ್ ​ಸಂಸ್ಥೆಗಳನ್ನು ಮುಚ್ಚುವೆ. ಚೀನಿ ಕಮ್ಯುನಿಷ್ಟ್​ ಪಕ್ಷವನ್ನ ನಮ್ಮ ವಿಶ್ವವಿದ್ಯಾಲಯದಗಳಿಂದ ಹೊರಹಾಕಲಾಗವುದು. ಚೀನಿ ಬೇಹಗಾರಿಕೆ ಎದುರಿಸಲು ಬ್ರಿಟನ್​ ದೇಶೀಯ ಬೇಹುಗಾರಿಕೆ ಸಂಸ್ಥೆ ಎಂಐ5 ಅನ್ನು ಬಳಸಲಾಗವುದು. ಬ್ರಿಟೀಷ್​ ಸ್ವತ್ತುಗಳನ್ನು ಚೀನಿಯರ ಸ್ವಾಧೀನಕ್ಕೆ ಹೋಗದಂತೆ ಎಚ್ಚರ ವಹಿಸಲಾಗುವುದು’ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago