Featured

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​ – Vishwanews24

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​

ಲಂಡನ್​: ಬ್ರಿಟನ್​ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯ ನಾಲ್ಕನೇ ಸುತ್ತಿನಲ್ಲೂ ರಿಷಿ ಸುನಕ್​ ಮುನ್ನಡೆ ಸಾಧಿಸಿದ್ದು, ಅಂತಿಮ ಸುತ್ತಿನತ್ತ ದಾಪುಗಾಲಿಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಿಷಿ ಸುನಕ್​ ಅವರು ಮಹತ್ವದ ಶಪಥ ಮಾಡಿದ್ದಾರೆ.

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.

ಪ್ರಧಾನಿ ಬೋರಿಸ್​ ಜಾನ್ಸನ್​​ರ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ರೇಸ್​ನಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವರೂ ಆದ ಇನ್ಫೋಸಿಸ್​ ಸಹ ಸಂಸ್ಥಾಪಕ ಎನ್.ಆರ್​. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಮುಂಚೂಣಿಯಲ್ಲಿದ್ದಾರೆ. ಅಂತಿಮ ಸುತ್ತಿಗೆ ಇಬ್ಬರು ಸ್ಪರ್ಧಿಗಳು ತೆರಳಿದ್ದು, ಸದ್ಯದ ಮಾಹಿತಿ ಪ್ರಕಾರ ಇವರ ಆಯ್ಕೆ ಬಹುತೇಕ ಖಚಿತವಾಗಿದೆ. ಆಡಳಿತಾರೂಢ ಕನ್ಸರ್ವೇಟಿವ್​ ಪಕ್ಷದಲ್ಲಿ ರಿಷಿ ಸುನಕ್​ ಅವರಿಗೆ ಒಳ್ಳೆಯ ಹೆಸರಿದೆ.

‘ಬ್ರಿಟನ್​-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನ ಹೊಂದಿರುವ ಏಕೈಕ ಅಭ್ಯರ್ಥಿ ರಿಷಿ ಸುನಕ್’​ ಎಂದು ಚೀನಾದ ಗ್ಲೋಬಲ್​ ಟೈಮ್ಸ್​ ಹೇಳಿತ್ತು. ಇನ್ನು ಚೀನಾ ಮತ್ತು ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲರಾಗಿದ್ದಾರೆ ಎಂದು ಅವರ ಪ್ರತಿಸ್ಪರ್ಧಿ ಲಿಜ್​ ಟ್ರುಸ್​ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಿಷಿ ಸುನಕ್, ‘ಚೀನಾದ ಸಂಸ್ಕೃತಿ ಮತ್ತು ಭಾಷಾ ಕಾರ್ಯಕ್ರಮಗಳ ಮೂಲಕ ಚೀನಿ ಪ್ರಭಾವ ಹೆಚ್ಚಾಗದಂತೆ ತಡೆಯಲು ಬ್ರಿಟನ್​ನಲ್ಲಿರುವ ಎಲ್ಲ 30 ಕನ್ಫ್ಯೂಷಿಯಸ್ ​ಸಂಸ್ಥೆಗಳನ್ನು ಮುಚ್ಚುವೆ. ಚೀನಿ ಕಮ್ಯುನಿಷ್ಟ್​ ಪಕ್ಷವನ್ನ ನಮ್ಮ ವಿಶ್ವವಿದ್ಯಾಲಯದಗಳಿಂದ ಹೊರಹಾಕಲಾಗವುದು. ಚೀನಿ ಬೇಹಗಾರಿಕೆ ಎದುರಿಸಲು ಬ್ರಿಟನ್​ ದೇಶೀಯ ಬೇಹುಗಾರಿಕೆ ಸಂಸ್ಥೆ ಎಂಐ5 ಅನ್ನು ಬಳಸಲಾಗವುದು. ಬ್ರಿಟೀಷ್​ ಸ್ವತ್ತುಗಳನ್ನು ಚೀನಿಯರ ಸ್ವಾಧೀನಕ್ಕೆ ಹೋಗದಂತೆ ಎಚ್ಚರ ವಹಿಸಲಾಗುವುದು’ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago