ನಾನು ಮತ್ತು ಪ್ರಜ್ವಲ್ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ : ನಿಖಿಲ್ ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್
ಬೆಂಗಳೂರು: ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭೆ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ದ ನನ್ನ ಗೆಲುವು ನಿಶ್ಚಿತ ಎಂದು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮಾತನಾಡಿದ ನಿಖಿಲ್, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ, ನಾವಿಬ್ಬರೂ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದ್ದಾರೆ,

ಸುಮಲತಾ ಅವರು ಈಗಾಗಲೇ ಜನಾಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿ ಮಾಡುತ್ತಿದ್ದಾರೆ. ಹೋದ ಕಡೆಯಲ್ಲಿ ಅವರಿಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ, ನಿಖಿಲ್ ಸಹ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸುಮಲತಾ ಅವರ ವಿರುದ್ಧ ನನ್ನ ಗೆಲುವು ನಿಶ್ಚಿತ. ನಾನು ಪ್ರಜ್ವಲ್ ಒಟ್ಟಾಗಿ ಜೆಡಿಎಸ್ ಕಟ್ಟುತ್ತೇವೆಂದು ಸ್ಪಷ್ಟಪಡಿಸಿದರು.

ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ಧ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ. ನಾವಿಬ್ಬರೂ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ. ಜೆಡಿಎಸ್ ಬೆಳೆಸುವುದು ನನ್ನ ಪ್ರಮುಖ ಧ್ಯೇಯ ಎಂದರು.

ಮಂಡ್ಯ ನಾಯಕರ ಒತ್ತಾಸೆಯಂತೆ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ, ಜೆಡಿಎಸ್ ಬೆಳೆಸುವುದು ನನ್ನ ಪ್ರಮುಖ ಧ್ಯೇಯ ಎಂದು ನಿಖಿಲ್ ತಿಳಿಸಿದ್ದಾರೆ.