Featured

“ನಾನು ಮತ್ತು ಮಹಾಭಾರತದ ಕರ್ಣ ಇಬ್ಬರೂ ಸಾಂದರ್ಭಿಕ ಶಿಶುಗಳು,” : ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು:”ನಾನು ಮತ್ತು ಮಹಾಭಾರತದ ಕರ್ಣ ಇಬ್ಬರೂ ಸಾಂದರ್ಭಿಕ ಶಿಶುಗಳು,” ಎಂಬ ಮಾತನ್ನು ಸದನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುವ ಮೂಲಕ ಕರ್ಣನಿಗೆ ತಮ್ಮನ್ನು ಹೋಲಿಸಿಕೊಂಡರು.

ಶುಕ್ರವಾರ ಕರ್ನಾಟಕ ರಾಜ್ಯದ ನೂತನ ಬಜೆಟ್​ ಮಂಡನೆ ಮಾಡಿದ ನಂತರ ಇಂದು ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಕರ್ಣ ಕೂಡ ಸಾಂದರ್ಭಿಕ ಶಿಶುವೇ ಎಂದಿದ್ದಾರೆ. ವಿರೋಧ ಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಸಿಎಂ ಆದ ತಮಗೆ ಅಪ್ಪ – ಅಮ್ಮ ಇಲ್ಲವೆಂದು ಹೀಗಳೆಯುತ್ತಿದ್ದಾರೆ. ಆದರೆ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರೇ ಈ ಸರ್ಕಾರದ ಅಪ್ಪ – ಅಮ್ಮಂದಿರು, ಎಂದು ಕುಮಾರಸ್ವಾಮಿ ಹೇಳಿದರು.

ವಿರೋಧ ಪಕ್ಷದ ನಾಯಕರು ಪದೇ ಪದೇ ಸಮ್ಮಿಶ್ರ ಸರ್ಕಾರವನ್ನು ಅಪವಿತ್ರ ಮೈತ್ರಿ ಸರ್ಕಾರ ಎಂದು ಬಣ್ಣಿಸುತ್ತಿವೆ. ಇದಕ್ಕೆ ಉತ್ತರಿಸಿದ ಕುಮಾರಸ್ವಾಮಿ 12 ವರ್ಷಗಳ ಹಿಂದೆ 2006ರಲ್ಲಿ ಜೆಡಿಎಸ್​ನಲ್ಲಿ 38 ಶಾಸಕರು ಮಾತ್ರ ಇದ್ದರು. ಆಗ ಸರ್ಕಾರ ಮಾಡಲು ಬಿಜೆಪಿ 84 ಶಾಸಕರು ಬೆಂಬಲ ಕೊಟ್ಟಾಗ ಪ್ರಜಾಪ್ರಭುತ್ವ ಕಗ್ಗೊಲೆ ಆಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಜತೆಗೆ ಆದ ಯಾರು ಮತ್ತು ಯಾಕೆ ಬೆಂಬಲ ಕೊಟ್ಟಿರಿ ಎಂಬುದನ್ನು ಮರೆ ಬಿಟ್ಟಿದ್ದೀರಾ ಎಂಬ ಪ್ರಶ್ನೆಯನ್ನು ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೇಳಿದರು.

ಅಂದು ಧರ್ಮಸಿಂಗ್ ಸರ್ಕಾರ ಅಸ್ತಿರಗೊಳಿಸಲು ಕೆಲವರು ಪ್ರಯತ್ನ ನಡೆಸಿದ್ದರು. ಚುನಾವಣೆಗೆ ಹೋಗೋಣ, ಈ ಸಮ್ಮಿಶ್ರ ಸರ್ಕಾರ ಸಾಕು ಎಂದು ಸೋನಿಯಾ ಗಾಂಧಿ ಜೊತೆ ಚರ್ಚಿಸಲು ದೇವೇಗೌಡರು ಮುಂದಾಗಿದ್ದರು. ಆದರೆ ಕೆಲ ಶಾಸಕರು ಬೇಡ ಎಂಬ ಸಲಹೆ ನೀಡಿದರು. ಆಗ ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕ ಮಾಡಿದ್ದರು. ದೇವರು ಕೊಟ್ಟ ಒಂದು ಆಶೀರ್ವಾದ , ಕಾಂಗ್ರೆಸ್ ಶಾಸಕರು ಕೊಟ್ಟ ಸಹಕಾರದಿಂದ ಸಿಎಂ ಆಗಿದ್ದೇನೆ ಎಂದು ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

2 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

2 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

2 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

4 hours ago