ಶಿವಮೊಗ್ಗ: ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ.ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕು ಎಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದನಂತರ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.
ಕಳೆದ ವರ್ಷದಿಂದ ನಾನು ಯಾರು ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…