ಬಳ್ಳಾರಿ : ನಾನು ಮತ್ತೆ ಮುಖ್ಯಮಂತ್ರಿಯಾದರೇ ಉಚಿತವಾಗಿ 10ಕೆಜಿ ಅಕ್ಕಿ ವಿತರಿಸುವುದಾಗಿ ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾದ ಸಮಯದಲ್ಲಿ ಅತೀ ಹೆಚ್ಚು ಯೋಜನೆಗಳನ್ನು ರೂಪಿಸಿದ್ದೇನೆ. ಅದರಲ್ಲೂ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚು ಬಡ ಕುಟುಂಬಗಳಿಗೆ ಪಡಿತರ ಧಾನ್ಯ ಲಭ್ಯವಾಗುವಂತೆ ಮಾಡಿದ್ದೇನೆ.
ಬಿಜೆಪಿ ಸರ್ಕಾರವಿದ್ದಾಗ ಯಾರಾದರೂ ಇಂತಹ ಯೋಜನೆ ತಂದಿದ್ದರಾ.? ಇಲ್ಲಿ ನೆರೆದಿರುವ ಹೆಣ್ಣು ಮಕ್ಕಳೇ ಕೈ ಎತ್ತಿ ಹೇಳಿ ಎಷ್ಟು ಜನರಿಗೆ ಅನ್ನಭಾಗ್ಯ ಯೋಜನೆಯ ಸೌಲಭ್ಯ ಸಿಗ್ತಾ ಇದೆ ಎಂದು ಸಭೆಯಲ್ಲಿ ನೆರೆದಿದ್ದವರನ್ನು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ಮುಂದೆ ನಾನು ಸಿಎಂ ಆದ್ರೇ, 10 ಕೆಜಿ ಅಕ್ಕಿಯನ್ನು ಕೊಡುವುದಾಗಿ ಘೋಷಣೆ ಮಾಡಿದರು.
ಅಂದಹಾಗೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ನಿನ್ನೆಯಷ್ಟೇ ಗದಗದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಸಭೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆಯೂ, ತಾವು ಮತ್ತೆ ಮುಖ್ಯಮಂತ್ರಿಯಾದರೇ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಇದನ್ನು ಇಂದು ಬಳ್ಳಾರಿಯ ಸಭೆಯಲ್ಲೂ ಪುನರ್ ಉಚ್ಚರಿಸಿರುವ ಅವರು, ಮತದಾರರನ್ನು ಸೆಳೆಯಲು ಮತ್ತೆ ಅನ್ನಭಾಗ್ಯ ಅಕ್ಕಿಯನ್ನು ಹೆಚ್ಚು ಮಾಡುವ ಮಾತನ್ನಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…