ಬಳ್ಳಾರಿ : ನಾನು ಮತ್ತೆ ಮುಖ್ಯಮಂತ್ರಿಯಾದರೇ ಉಚಿತವಾಗಿ 10ಕೆಜಿ ಅಕ್ಕಿ ವಿತರಿಸುವುದಾಗಿ ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾದ ಸಮಯದಲ್ಲಿ ಅತೀ ಹೆಚ್ಚು ಯೋಜನೆಗಳನ್ನು ರೂಪಿಸಿದ್ದೇನೆ. ಅದರಲ್ಲೂ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚು ಬಡ ಕುಟುಂಬಗಳಿಗೆ ಪಡಿತರ ಧಾನ್ಯ ಲಭ್ಯವಾಗುವಂತೆ ಮಾಡಿದ್ದೇನೆ.
ಬಿಜೆಪಿ ಸರ್ಕಾರವಿದ್ದಾಗ ಯಾರಾದರೂ ಇಂತಹ ಯೋಜನೆ ತಂದಿದ್ದರಾ.? ಇಲ್ಲಿ ನೆರೆದಿರುವ ಹೆಣ್ಣು ಮಕ್ಕಳೇ ಕೈ ಎತ್ತಿ ಹೇಳಿ ಎಷ್ಟು ಜನರಿಗೆ ಅನ್ನಭಾಗ್ಯ ಯೋಜನೆಯ ಸೌಲಭ್ಯ ಸಿಗ್ತಾ ಇದೆ ಎಂದು ಸಭೆಯಲ್ಲಿ ನೆರೆದಿದ್ದವರನ್ನು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ಮುಂದೆ ನಾನು ಸಿಎಂ ಆದ್ರೇ, 10 ಕೆಜಿ ಅಕ್ಕಿಯನ್ನು ಕೊಡುವುದಾಗಿ ಘೋಷಣೆ ಮಾಡಿದರು.
ಅಂದಹಾಗೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ನಿನ್ನೆಯಷ್ಟೇ ಗದಗದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಸಭೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆಯೂ, ತಾವು ಮತ್ತೆ ಮುಖ್ಯಮಂತ್ರಿಯಾದರೇ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಇದನ್ನು ಇಂದು ಬಳ್ಳಾರಿಯ ಸಭೆಯಲ್ಲೂ ಪುನರ್ ಉಚ್ಚರಿಸಿರುವ ಅವರು, ಮತದಾರರನ್ನು ಸೆಳೆಯಲು ಮತ್ತೆ ಅನ್ನಭಾಗ್ಯ ಅಕ್ಕಿಯನ್ನು ಹೆಚ್ಚು ಮಾಡುವ ಮಾತನ್ನಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…