ನಾನು ಮದುವೆಯಾಗುವ ಹುಡುಗಿಗೆ ಸಿನಿಮಾರಂಗದಲ್ಲಿ ಯಾವುದೇ ಲಿಂಕ್ ಇಲ್ಲ : ನಿಖಿಲ್ -Vishwanews24

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಬಗ್ಗೆ ಗಾಸಿಪ್ ಹರಿದಾಡುತ್ತಿದೆ. ಈಗ ಸ್ವತಃ ನಿಖಿಲ್ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.

ಬುಧವಾರ ನಿಖಿಲ್ ತಮ್ಮ 30ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಮಾಧ್ಯಮವೊಂದಕ್ಕೆ ಮಾತನಾಡಿದ ಅವರು ಅವರು, ನನ್ನ ಮದುವೆ ಬಗ್ಗೆ ಶೀಘ್ರದಲ್ಲೇ ಅನೌನ್ಸ್ ಮಾಡುತ್ತೇನೆ. ಅಲ್ಲಿಯವರೆಗೂ ಅತುರ ಬೇಡ. ನನ್ನ ಮದುವೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು, ಆ ಸುದ್ದಿಗಳೆಲ್ಲ ಸುಳ್ಳು. ಕಳೆದ ಒಂದು ವರ್ಷದಿಂದ ನಮ್ಮ ಮನೆಯಲ್ಲಿ ನನಗೆ ಹುಡುಗಿಯನ್ನು ಹುಡುಕುತ್ತಿದ್ದು, ಸದ್ಯದಲ್ಲೇ ಫೈನಲ್ ಆಗಲಿದೆ. ಆಕೆ ಯಾರು ಎನ್ನುವುದನ್ನು ಸ್ವತಃ ನಾನೇ ತಿಳಿಸುತ್ತೇನೆ ಎಂದು ಗಾಸಿಪ್‍ಗಳಿಗೆಲ್ಲ ಉತ್ತರ ನೀಡಿದ್ದಾರೆ.

ನಾನು ಮದುವೆಯಾಗುವ ಹುಡುಗಿ ಸಿನಿಮಾರಂಗದಲ್ಲಿ ಯಾವುದೇ ಲಿಂಕ್ ಇಲ್ಲ. ಆಕೆಗೆ ಚಿತ್ರರಂಗದ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಆಕೆ ಸರಳವಾದ ಕನ್ನಡದ ಹುಡುಗಿಯಾಗಿದ್ದು, ನಮ್ಮ ಸಂಸ್ಕೃತಿ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಂಡಿದ್ದಾಳೆ. ಅಪ್ಪ-ಅಮ್ಮ ನನ್ನ ಮದುವೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವೇ ಅಂತಿಮ ಎಂದು ನಿಖಿಲ್ ತಿಳಿಸಿದ್ದಾರೆ.

ವೈಯಕ್ತಿಕ ವಿಚಾರದ ಹೊರತಾಗಿ ನಿಖಿಲ್ ತಮ್ಮ ಚಿತ್ರಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಾನು ಎರಡು ಚಿತ್ರಗಳಲ್ಲಿ ನಟಿಸಲಿದ್ದು, ಈ ವರ್ಷ ಆ ಎರಡು ಚಿತ್ರಗಳು ಬಿಡುಗಡೆಯಾಗಲಿದೆ ಎಂದು ನಿಖಿಲ್ ಹೇಳಿದ್ದಾರೆ. ನಿಖಿಲ್ ಬುಧವಾರ ತಮ್ಮ ಹುಟ್ಟುಹಬ್ಬವನ್ನು ತಂದೆಯ ಆಶೀರ್ವಾದ ಪಡೆಯುವ ಮೂಲಕ ಬಹಳ ಸರಳವಾಗಿ ಆಚರಿಸಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

8 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

9 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

9 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

10 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

10 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

10 hours ago