ನಾನು ಮದುವೆಯಾಗುವ ಹುಡುಗಿಗೆ ಸಿನಿಮಾರಂಗದಲ್ಲಿ ಯಾವುದೇ ಲಿಂಕ್ ಇಲ್ಲ : ನಿಖಿಲ್ -Vishwanews24

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಬಗ್ಗೆ ಗಾಸಿಪ್ ಹರಿದಾಡುತ್ತಿದೆ. ಈಗ ಸ್ವತಃ ನಿಖಿಲ್ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.

ಬುಧವಾರ ನಿಖಿಲ್ ತಮ್ಮ 30ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಮಾಧ್ಯಮವೊಂದಕ್ಕೆ ಮಾತನಾಡಿದ ಅವರು ಅವರು, ನನ್ನ ಮದುವೆ ಬಗ್ಗೆ ಶೀಘ್ರದಲ್ಲೇ ಅನೌನ್ಸ್ ಮಾಡುತ್ತೇನೆ. ಅಲ್ಲಿಯವರೆಗೂ ಅತುರ ಬೇಡ. ನನ್ನ ಮದುವೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು, ಆ ಸುದ್ದಿಗಳೆಲ್ಲ ಸುಳ್ಳು. ಕಳೆದ ಒಂದು ವರ್ಷದಿಂದ ನಮ್ಮ ಮನೆಯಲ್ಲಿ ನನಗೆ ಹುಡುಗಿಯನ್ನು ಹುಡುಕುತ್ತಿದ್ದು, ಸದ್ಯದಲ್ಲೇ ಫೈನಲ್ ಆಗಲಿದೆ. ಆಕೆ ಯಾರು ಎನ್ನುವುದನ್ನು ಸ್ವತಃ ನಾನೇ ತಿಳಿಸುತ್ತೇನೆ ಎಂದು ಗಾಸಿಪ್‍ಗಳಿಗೆಲ್ಲ ಉತ್ತರ ನೀಡಿದ್ದಾರೆ.

ನಾನು ಮದುವೆಯಾಗುವ ಹುಡುಗಿ ಸಿನಿಮಾರಂಗದಲ್ಲಿ ಯಾವುದೇ ಲಿಂಕ್ ಇಲ್ಲ. ಆಕೆಗೆ ಚಿತ್ರರಂಗದ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಆಕೆ ಸರಳವಾದ ಕನ್ನಡದ ಹುಡುಗಿಯಾಗಿದ್ದು, ನಮ್ಮ ಸಂಸ್ಕೃತಿ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಂಡಿದ್ದಾಳೆ. ಅಪ್ಪ-ಅಮ್ಮ ನನ್ನ ಮದುವೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವೇ ಅಂತಿಮ ಎಂದು ನಿಖಿಲ್ ತಿಳಿಸಿದ್ದಾರೆ.

ವೈಯಕ್ತಿಕ ವಿಚಾರದ ಹೊರತಾಗಿ ನಿಖಿಲ್ ತಮ್ಮ ಚಿತ್ರಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಾನು ಎರಡು ಚಿತ್ರಗಳಲ್ಲಿ ನಟಿಸಲಿದ್ದು, ಈ ವರ್ಷ ಆ ಎರಡು ಚಿತ್ರಗಳು ಬಿಡುಗಡೆಯಾಗಲಿದೆ ಎಂದು ನಿಖಿಲ್ ಹೇಳಿದ್ದಾರೆ. ನಿಖಿಲ್ ಬುಧವಾರ ತಮ್ಮ ಹುಟ್ಟುಹಬ್ಬವನ್ನು ತಂದೆಯ ಆಶೀರ್ವಾದ ಪಡೆಯುವ ಮೂಲಕ ಬಹಳ ಸರಳವಾಗಿ ಆಚರಿಸಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

5 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago