ಬಳ್ಳಾರಿಯಲ್ಲಿ ಮಂಗಳವಾರ ರಾತ್ರಿ ನಡೆದ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿರುವ ಜರ್ನಾದನ ರೆಡ್ಡಿ, ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ಒಂದು ವೇಳೆ ನಾನು ಮನಸ್ಸು ಮಾಡಿದರೆ ಯಾವತ್ತಾದರೂ ಒಂದು ದಿನ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.
ರೆಡ್ಡಿ, ರಾಮುಲು ಸಹೋದರರಿಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ ಎಂದಿರುವ ಜನಾರ್ದನ ರೆಡ್ಡಿ, ಸಾಮಾನ್ಯ ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದರು. ಸೋಮಶೇಖರರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷ ಆಗಿ ಕೆಲಸ ಮಾಡಿದರು. ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರೂ, ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದ ಶ್ರೀ ಕನಕ ದುರ್ಗಮ್ಮ ದೇವಿ ನನಗೆ ನೀಡಿದ್ದಾಳೆ ಎಂದು ಹೇಳಿದರು.
ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ ಎಂದು ಹೇಳಿದ ಜನಾರ್ದನ ರೆಡ್ಡಿ, ಅಷ್ಟು ತೊಂದರೆ ನನಗೆ ನೀಡಿದರು. ನನ್ನ ಬಂಧನ ಮಾಡಲು ಬಂದಿದ್ದ ಸಿಬಿಐ ಅಧಿಕಾರಿಗಳೇ ಖುದ್ದು ಹೇಳಿದ್ರು. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ, ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…