Featured

ನಾನು ಮನಸ್ಸು ಮಾಡಿದರೆ ಯಾವತ್ತಾದ್ರೂ ಒಂದು ದಿನ ಮುಖ್ಯಮಂತ್ರಿ ಆಗುವೆ : ಜನಾರ್ದನ ರೆಡ್ಡಿ – Vishwanews24

ನಾನು ಮನಸ್ಸು ಮಾಡಿದರೆ ಯಾವತ್ತಾದ್ರೂ ಒಂದು ದಿನ ಮುಖ್ಯಮಂತ್ರಿ ಆಗುವೆ : ಜನಾರ್ದನ ರೆಡ್ಡಿ – Vishwanews24

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಯಾವತ್ತಾದ್ರೂ ಒಂದು ಮುಖ್ಯಮಂತ್ರಿ ಆಗುವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ತನ್ನ ರಾಜಕೀಯದ ಗುರಿಯನ್ನು ಪರೋಕ್ಷವಾಗಿ ಜನತೆಯ ಮುಂದೆ ತೆರೆದಿಟ್ಟಿದ್ದಾರೆ.

ಬಳ್ಳಾರಿಯಲ್ಲಿ ಮಂಗಳವಾರ ರಾತ್ರಿ‌ ನಡೆದ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿರುವ ಜರ್ನಾದನ ರೆಡ್ಡಿ, ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ಒಂದು ವೇಳೆ ನಾನು ಮನಸ್ಸು ಮಾಡಿದರೆ ಯಾವತ್ತಾದರೂ ಒಂದು ದಿನ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.

ರೆಡ್ಡಿ, ರಾಮುಲು ಸಹೋದರರಿಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ ಎಂದಿರುವ ಜನಾರ್ದನ ರೆಡ್ಡಿ, ಸಾಮಾನ್ಯ ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದರು. ಸೋಮಶೇಖರರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷ ಆಗಿ ಕೆಲಸ ಮಾಡಿದರು. ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರೂ, ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದ ಶ್ರೀ ಕನಕ ದುರ್ಗಮ್ಮ ದೇವಿ ನನಗೆ ನೀಡಿದ್ದಾಳೆ ಎಂದು ಹೇಳಿದರು.

ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ ಎಂದು ಹೇಳಿದ ಜನಾರ್ದನ ರೆಡ್ಡಿ, ಅಷ್ಟು ತೊಂದರೆ ನನಗೆ ನೀಡಿದರು. ನನ್ನ ಬಂಧನ ಮಾಡಲು ಬಂದಿದ್ದ ಸಿಬಿಐ ಅಧಿಕಾರಿಗಳೇ ಖುದ್ದು ಹೇಳಿದ್ರು. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ, ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

5 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

7 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

10 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

10 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

11 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

11 hours ago