ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನನುಭವಿಸಿದ ಬಳಿಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಹಾಗೂ ಕ್ಷೇತ್ರದ ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಹೆಚ್ಚು ಮಾಡುವ ನಿಟ್ಟಿನಲ್ಲಿ ಮಂಡ್ಯದಿಂದ ಒಂದು ಕಿ.ಮೀ. ದೂರದಲ್ಲೇ ನಿಖಿಲ್ ತೋಟ ಖರೀದಿಸಿದ್ದಾರೆ.
ಇದೇ ವೇಳೆ ಈ ಬಗ್ಗೆ ಮಳವಳ್ಳಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿಯವರು ಮಂಡ್ಯದಲ್ಲಿ ನಾನು ಮಾಡಿರುವ ಹೊಸ ಮನೆಗೆ ‘ನಿಮ್ಮ ಮನೆ’ ಎಂದು ಹೆಸರು ಇಡುವೆ ಅಂತ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು ಮನೆಯಲ್ಲಿ ಇಲ್ಲ ಅಂದ್ರೂ ಯಾರು ಬೇಕಾದರೂ ಮನೆಗೆ ಬರಬಹುದು. 15 ದಿನದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದರು.
ಮಂಡ್ಯ ಪ್ರವಾಸದ ಬಗ್ಗೆ ಜೆಡಿಎಸ್ ವರಿಷ್ಠರ ಜತೆ ಚರ್ಚೆಮಾಡಿದ್ದೇನೆ. ನನಗೆ ಮತಚಲಾಯಿಸಿದ ಮತದಾರರಿಗೆ ಧನ್ಯವಾದಗಳು. ಚುನಾವಣೆ ಫಲಿತಾಂಶ ಬಂದ ನಂತರ ನಿಖಿಲ್ ಸೋತಿದ್ರಿಂದ ಗಲಾಟೆ ಮಾಡಿದ್ದಾರೆಂದು ಯಾವುದೋ ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಬರೆದಿದ್ದರು. ಆದರೆ ಆ ರೀತಿ ಬರೆಯುವ ಮುನ್ನ ಆ ಮಾಹಿತಿ ಸರಿ ಇದೆಯಾ ಇಲ್ಲವಾ ಎನ್ನುವುದನ್ನು ಪರಿಶೀಲನೆ ಮಾಡಿ. ಈ ಸಂಗತಿ ನನಗೆ ಬಹಳ ನೋವುಂಟು ಮಾಡಿದೆ. ನನ್ನ ಧೃತಿಗೆಡಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…