‘ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ವಿಷಯವಾಗಿ ಮಾತನಾಡಿದ ಅನಂತ್ ನಾಗ್, ‘ರಾಷ್ಟ್ರದ ನಿರ್ಮಾಣ ದಲ್ಲಿ ಮಾಧ್ಯಮಗಳ ಪಾತ್ರ ಅನ್ನೋ ವಿಚಾರದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಾಗ ನಾನು ಯೋಚಿಸಿದೆ. ಇದ್ಯಾವುದು ಮೋದಿ ತಂದಿರುವ ಹೊಸ ಕಾರ್ಯಕ್ರಮವಾ ಅಂತಾ ಯೋಚನೆಗೆ ಬಿದ್ದೆ. ಪತ್ರಿಕೆಗಳು ಹೀಗೆ ನಡೆಯಬೇಕು ಅಂತಾ ಸರ್ಕಾರಗಳು ತೀರ್ಮಾನ ಮಾಡಬೇಕಾ..? ಹೊಸ ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಅಂತಾ ಅವರೇ ಚಿಂತಿಸಬೇಕು’ ಎಂದು ಅವರು ಪ್ರಧಾನ ಭಾಷಣದಲ್ಲಿ ಮಾತನಾಡಿದರು. ಇದನ್ನೂ ಓದಿ: ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು – Vishwanews24
ಬಿಜೆಪಿ ಪರವಾಗಿ ಈಗಾಗಲೇ ಅನಂತ್ ನಾಗ್ (Anant Nag) ಸಾಕಷ್ಟು ಮಾತುಗಳನ್ನು ಆಡಿದ್ದಾರೆ. ಸಂಘ ಪರಿವಾರದ ಅನೇಕ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗಿದ್ದಾರೆ. ಮೋದಿ ಸಾಧನೆಯನ್ನು ಹಲವು ಬಾರಿ ಕೊಂಡಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾವು ಮೋದಿ ಭಕ್ತ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…