ಮಂಗಳೂರು: “ಹಿಂದುತ್ವ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ದಾಂತದಿಂದ ಹಿಂದೆ ಸರಿಯುತ್ತಿದ್ದು, ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎಂಬುದು ನನ್ನ ನಿಲುವು. ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುವುದಿಲ್ಲ ಆದರೆ ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ಧಾರೆ.
ಉಡುಪಿ ಹಾಗೂ ಶೃಂಗೇರಿ ಭೇಟಿಯ ಹಿನ್ನೆಲೆ ಮಂಗಳವಾರ ಮಂಗಳೂರಿಗೆ ಆಗಮಿಸಿದ ವೇಳೆ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎಂ. ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ಚೀನಾದ ಆಕ್ರಮಣಕಾರಿ ನೀತಿಯ ವಿರುದ್ದ ನರೇಂದ್ರ ಮೋದಿ ಸರ್ಕಾರದ ದುರ್ಬಲ ನಿಲುವಿನ ಕುರಿತು ತೀವ್ರ ಅಸಮಾಧನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನಗಳ ವಿರುದ್ಧ ಹೋರಾಡಿದ್ದೇನೆ. ರಾಮಸೇತು ಒಡೆಯುವುದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದೆ. ಮೋದಿ ಸರ್ಕಾರ ರಾಮಸೇತುವನ್ನು ಪಾರಂಪರಿಕ ತಾಣವನ್ನಾಗಿ ಮಾಡಿಲ್ಲ. ಈ ಬಗ್ಗೆ ನನ್ನ ಅಸಮಾಧಾನವನ್ನು ಪತ್ರಗಳ ಮೂಲಕ ಹಲವಾರು ಬಾರಿ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.
“ನಾನು ಜನಸಂಘದೊಂದಿಗೆ ಇದ್ದವನು. ಮೋದಿ ನೀತಿಯ ಕುರಿತು ಅಸಮಾಧಾನವಿದೆಯೇ ಹೊರತು ಬಿಜೆಪಿಯ ಬಗ್ಗೆ ಅಲ್ಲ. ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ನಾನು ಬಿಜೆಪಿಯಲ್ಲೇ ಇರುತ್ತೇನೆ” ಎಂದು ಹೇಳಿದ್ದಾರೆ.
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…