ಮಂಗಳೂರು: “ಹಿಂದುತ್ವ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ದಾಂತದಿಂದ ಹಿಂದೆ ಸರಿಯುತ್ತಿದ್ದು, ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎಂಬುದು ನನ್ನ ನಿಲುವು. ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುವುದಿಲ್ಲ ಆದರೆ ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ಧಾರೆ.
ಉಡುಪಿ ಹಾಗೂ ಶೃಂಗೇರಿ ಭೇಟಿಯ ಹಿನ್ನೆಲೆ ಮಂಗಳವಾರ ಮಂಗಳೂರಿಗೆ ಆಗಮಿಸಿದ ವೇಳೆ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎಂ. ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ಚೀನಾದ ಆಕ್ರಮಣಕಾರಿ ನೀತಿಯ ವಿರುದ್ದ ನರೇಂದ್ರ ಮೋದಿ ಸರ್ಕಾರದ ದುರ್ಬಲ ನಿಲುವಿನ ಕುರಿತು ತೀವ್ರ ಅಸಮಾಧನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನಗಳ ವಿರುದ್ಧ ಹೋರಾಡಿದ್ದೇನೆ. ರಾಮಸೇತು ಒಡೆಯುವುದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದೆ. ಮೋದಿ ಸರ್ಕಾರ ರಾಮಸೇತುವನ್ನು ಪಾರಂಪರಿಕ ತಾಣವನ್ನಾಗಿ ಮಾಡಿಲ್ಲ. ಈ ಬಗ್ಗೆ ನನ್ನ ಅಸಮಾಧಾನವನ್ನು ಪತ್ರಗಳ ಮೂಲಕ ಹಲವಾರು ಬಾರಿ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.
“ನಾನು ಜನಸಂಘದೊಂದಿಗೆ ಇದ್ದವನು. ಮೋದಿ ನೀತಿಯ ಕುರಿತು ಅಸಮಾಧಾನವಿದೆಯೇ ಹೊರತು ಬಿಜೆಪಿಯ ಬಗ್ಗೆ ಅಲ್ಲ. ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ನಾನು ಬಿಜೆಪಿಯಲ್ಲೇ ಇರುತ್ತೇನೆ” ಎಂದು ಹೇಳಿದ್ದಾರೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…