ಮಂಗಳೂರು: “ಹಿಂದುತ್ವ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ದಾಂತದಿಂದ ಹಿಂದೆ ಸರಿಯುತ್ತಿದ್ದು, ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎಂಬುದು ನನ್ನ ನಿಲುವು. ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುವುದಿಲ್ಲ ಆದರೆ ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ಧಾರೆ.
ಉಡುಪಿ ಹಾಗೂ ಶೃಂಗೇರಿ ಭೇಟಿಯ ಹಿನ್ನೆಲೆ ಮಂಗಳವಾರ ಮಂಗಳೂರಿಗೆ ಆಗಮಿಸಿದ ವೇಳೆ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎಂ. ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ಚೀನಾದ ಆಕ್ರಮಣಕಾರಿ ನೀತಿಯ ವಿರುದ್ದ ನರೇಂದ್ರ ಮೋದಿ ಸರ್ಕಾರದ ದುರ್ಬಲ ನಿಲುವಿನ ಕುರಿತು ತೀವ್ರ ಅಸಮಾಧನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನಗಳ ವಿರುದ್ಧ ಹೋರಾಡಿದ್ದೇನೆ. ರಾಮಸೇತು ಒಡೆಯುವುದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದೆ. ಮೋದಿ ಸರ್ಕಾರ ರಾಮಸೇತುವನ್ನು ಪಾರಂಪರಿಕ ತಾಣವನ್ನಾಗಿ ಮಾಡಿಲ್ಲ. ಈ ಬಗ್ಗೆ ನನ್ನ ಅಸಮಾಧಾನವನ್ನು ಪತ್ರಗಳ ಮೂಲಕ ಹಲವಾರು ಬಾರಿ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.
“ನಾನು ಜನಸಂಘದೊಂದಿಗೆ ಇದ್ದವನು. ಮೋದಿ ನೀತಿಯ ಕುರಿತು ಅಸಮಾಧಾನವಿದೆಯೇ ಹೊರತು ಬಿಜೆಪಿಯ ಬಗ್ಗೆ ಅಲ್ಲ. ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ನಾನು ಬಿಜೆಪಿಯಲ್ಲೇ ಇರುತ್ತೇನೆ” ಎಂದು ಹೇಳಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…