ಮಂಗಳೂರು: “ಹಿಂದುತ್ವ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ದಾಂತದಿಂದ ಹಿಂದೆ ಸರಿಯುತ್ತಿದ್ದು, ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎಂಬುದು ನನ್ನ ನಿಲುವು. ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುವುದಿಲ್ಲ ಆದರೆ ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ಧಾರೆ.
ಉಡುಪಿ ಹಾಗೂ ಶೃಂಗೇರಿ ಭೇಟಿಯ ಹಿನ್ನೆಲೆ ಮಂಗಳವಾರ ಮಂಗಳೂರಿಗೆ ಆಗಮಿಸಿದ ವೇಳೆ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎಂ. ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ಚೀನಾದ ಆಕ್ರಮಣಕಾರಿ ನೀತಿಯ ವಿರುದ್ದ ನರೇಂದ್ರ ಮೋದಿ ಸರ್ಕಾರದ ದುರ್ಬಲ ನಿಲುವಿನ ಕುರಿತು ತೀವ್ರ ಅಸಮಾಧನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನಗಳ ವಿರುದ್ಧ ಹೋರಾಡಿದ್ದೇನೆ. ರಾಮಸೇತು ಒಡೆಯುವುದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದೆ. ಮೋದಿ ಸರ್ಕಾರ ರಾಮಸೇತುವನ್ನು ಪಾರಂಪರಿಕ ತಾಣವನ್ನಾಗಿ ಮಾಡಿಲ್ಲ. ಈ ಬಗ್ಗೆ ನನ್ನ ಅಸಮಾಧಾನವನ್ನು ಪತ್ರಗಳ ಮೂಲಕ ಹಲವಾರು ಬಾರಿ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.
“ನಾನು ಜನಸಂಘದೊಂದಿಗೆ ಇದ್ದವನು. ಮೋದಿ ನೀತಿಯ ಕುರಿತು ಅಸಮಾಧಾನವಿದೆಯೇ ಹೊರತು ಬಿಜೆಪಿಯ ಬಗ್ಗೆ ಅಲ್ಲ. ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ನಾನು ಬಿಜೆಪಿಯಲ್ಲೇ ಇರುತ್ತೇನೆ” ಎಂದು ಹೇಳಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…