Featured

ನಾನು ಯಾರಿಗೂ ಅಗೌರವ ತೋರಿಲ್ಲ, ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ : ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಮಿಚೆಲ್ ಸ್ಪಷ್ಟನೆ – vishwanews24

ನಾನು ಯಾರಿಗೂ ಅಗೌರವ ತೋರಿಲ್ಲ, ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ : ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಮಿಚೆಲ್ ಸ್ಪಷ್ಟನೆ

ನವದೆಹಲಿ: ವಿಶ್ವಕಪ್ 2023 ರ ಟ್ರೋಫಿ ಮೇಲೆ ಕಾಲಿಟ್ಟು ಭಾರೀ ವಿವಾದಕ್ಕೀಡಾದ ಬಳಿಕ ಇದೀಗ ಆಸೀಸ್ ತಂಡದ ಆಲ್ ರೌಂಡರ್ ಮಿಚೆಲ್ ಮಾರ್ಷ್ ಸ್ಪಷ್ಟನೆ ನೀಡಿದ್ದಾರೆ.

ನಾನು ಯಾರಿಗೂ ಅಗೌರವ ತೋರಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಿಲ್ಲ. ಆ ಫೋಟೋ ಸಾಕಷ್ಟು ವೈರಲ್ ಆಗಿದೆ ಎಂದು ಹಲವರು ನನ್ನ ಗಮನಕ್ಕೆ ತಂದಿದ್ದರು. ಆದರೆ ನಾನು ಅದನ್ನು ನೊಡಲು ಹೋಗಿಲ್ಲ. ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ ಎಂದು ಮಾರ್ಷ್ ತಿಳಿಸಿದ್ದಾರೆ.

ನ.19 ರಂದು ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ  ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್‍ಗಳಿಂದ ಭಾರತ ತಂಡವನ್ನು ಮಣಿಸಿತ್ತು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸತತ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.

ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ಚಿತ್ರಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago