ಮಂಡ್ಯ: ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಎಂದು ನಟ ದರ್ಶನ್ಹೇಳಿದರು. ಬೆಳಗ್ಗೆಯಿಂದ ಮಂಡ್ಯ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಮತಯಾಚನೆ ಮಾಡುತ್ತಿದ್ದಾರೆ ದರ್ಶನ್.
ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.
ಹಲಗೂರು ಗ್ರಾಮಕ್ಕೆ ದರ್ಶನ್ ಬರುತ್ತಿದ್ದಂತೆಯೇ ಅಭಿಮಾನಿಗಳಿಂದ ಜೈಕಾರ ಕೇಳಿ ಬಂತು. ಡಿ ಬಾಸ್ ಡಿ ಬಾಸ್ ಘೋಷಣೆ ಮೊಳಗಿಸಿ ಸಂಭ್ರಮಿಸಿದ್ದಾರೆ ಅಭಿಮಾನಿಗಳು. ಬೃಹತ್ ಗುಲಾಬಿ ಹೂವಿನ ಹಾರ ಸಮರ್ಪಣೆ ಕೂಡ ಮಾಡಿದ್ದಾರೆ. ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ನೆಚ್ಚಿನ ನಟನಿಗೆ ಸ್ವಾಗತ ನೀಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…