Featured

ನಾನು ಯಾವುದೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಭಾಗಿಯಾಗಿಲ್ಲ , ನನ್ನನ್ನು ಪೊಲೀಸರು ಬಂಧಿಸಿಲ್ಲ : ನಟ ಮಂಜುನಾಥ್‌ ಸ್ಪಷ್ಟನೆ – Vishwanews24

ನಾನು ಯಾವುದೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಭಾಗಿಯಾಗಿಲ್ಲ , ನನ್ನನ್ನು ಪೊಲೀಸರು ಬಂಧಿಸಿಲ್ಲ : ನಟ ಮಂಜುನಾಥ್‌ ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟನೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಸಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮಂಜುನಾಥ್‌ ಅಲಿಯಾಸ್‌ ಸಂಜು ಸ್ಪಷ್ಟನೆ ನೀಡಿದ್ದಾರೆ.

ನನ್ನನ್ನೇ ಹೋಲುವ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ, ನಾನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಯಪ್​​ನಲ್ಲಿ ಯುವ ನಟ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪದಡಿ ಅವರನ್ನು ಸುದ್ದುಗುಂಟೆಪಾಳ್ಯ‌ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು.

‘ನನ್ನ ಹಾಗೇ ಇರುವ ಮಂಜುನಾಥ್ ಅಲಿಯಾಸ್ ಸಂಜು ಎಂಬಾತನನ್ನ‌ು ವೇಶ್ಯಾವಾಟಿಕೆ ಆರೋಪದಡಿ ಬಂಧಿಸಿದ್ದಾರೆ.

ಆದರೆ, ಮಾಧ್ಯಮಗಳಲ್ಲಿ‌ ನನ್ನ ಹೆಸರು ಪ್ರಸ್ತಾಪಿಸಲಾಗಿತ್ತು. ಈ ಸುದ್ದಿ ನೋಡಿದಾಕ್ಷಣ ನಾನೇ‌ ಆತಂಕಕ್ಕೆ‌ ಒಳಗಾದೆ. ಕೂಡಲೇ‌ ಸ್ನೇಹಿತರು, ಸಂಬಂಧಿಕರೆಲ್ಲರೂ ಫೋನ್ ಮಾಡಿ ವಿಚಾರಿಸಿದ್ದರು. ನಾನು ಮನೆಯಲ್ಲೇ‌ ಇದ್ದೇನೆ. ನನ್ನನ್ನು ಪೊಲೀಸರು ಬಂಧಿಸಿಲ್ಲ’ ಎಂದು ಹೇಳಿದ್ದಾರೆ.

ಘಟನೆ ಹಿನ್ನೆಲೆ:

ಖಾಸಗಿ ಆಯಪ್‌ನಲ್ಲಿ ಮಹಿಳೆಯರ ನಕಲಿ‌ ಫೋಟೋ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮವಾಗಿ ಹಣ‌ ಸಂಪಾದನೆ‌ಯಲ್ಲಿ ಮಾಡುತ್ತಿದ್ದ ಆರು ಮಂದಿ‌ ದಂಧೆಕೋರರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಸೆರೆಹಿಡಿದಿದ್ದರು. ಗ್ರಾಹಕರು ನೀಡಿದ‌ ದೂರು ಆಧರಿಸಿ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿದ್ದ ಮಂಜುನಾಥ್, ಮಲ್ಲಿಕಾರ್ಜುನಯ್ಯ, ಮಂಜುನಾಥ್, ಮೋಹನ್, ಹನುಮೇಶ್ ಮತ್ತು ರಾಜೇಶ್ ಎಂಬುವರನ್ನು ಬಂಧಿಸಲಾಗಿತ್ತು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…

3 minutes ago

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

20 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

21 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

22 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

22 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

22 hours ago