Featured

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್

ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ. ನೂತನ ಸಂಪುಟಕ್ಕೆ ಸಂಬಂಧಿಸಿ ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುವೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಖಾದರ್ ಸಾಮಾಜಿಕ ಜಾಲತಾಣಗಳನ್ನು ಗಮನಿಸಿ ಯಾರೂ ಅಧಿಕಾರ ನೀಡುವುದಿಲ್ಲ. ನಮ್ಮ ಕೆಲಸ ಕಾರ್ಯ ನೋಡಿ ಜವಾಬ್ದಾರಿ ವಹಿಸುತ್ತಾರೆ. ನನಗೆ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.

ಉಪಮುಖ್ಯಮಂತ್ರಿ ಹುದ್ದೆಗೆ ತಮ್ಮ ಹೆಸರು ಹರಿದಾಡಿದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ನನಗೆ ಆ ವಿಚಾರ ಗೊತ್ತಿಲ್ಲ. ಸರಕಾರ ಸೂಚಿಸಿದಾಗ ವಿಧಾನಸಭಾ ಅಧಿವೇಶನಕ್ಕೆ ಏರ್ಪಾಟು ಮಾಡುವೆ. ಸಚಿವನಾಗಿ ಕಾರ್ಯನಿರ್ವಹಿಸು ಅಂದರೆ ಅದನ್ನು ಪಾಲಿಸುವೆ. ಉಪ ಮುಖ್ಯಮಂತ್ರಿ ಜವಾಬ್ದಾರಿ ನಿಭಾಯಿಸು ಅಂದರೆ ಅದನ್ನೂ ಮಾಡುವೆ. ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಅದಕ್ಕೆ ಬದ್ಧನಾಗಿರುವೆ ಎಂದರು.

ನಾನು ಶಾಸಕನಾಗಿದ್ದಾಗ ಸದನವೀರ ಪ್ರಶಸ್ತಿ ಬಂತು. ಆರೋಗ್ಯ ಸಚಿವನಾಗಿದ್ದಾಗ ರಾಷ್ಟ್ರೀಯ ಪ್ರಶಸ್ತಿ ಬಂತು. ನಗರಾಭಿವೃದ್ಧಿ ಹಾಗೂ ವಸತಿ ಸಚಿವನಾಗಿ ಮಾಡಿದ ಸಾಧನೆ ನೋಡಿ ನನ್ನನ್ನು ಸದನದ ಉಪನಾಯಕನನ್ನಾಗಿ ನೇಮಿಸಿತು. ಅದರ ನಿರ್ವಹಣೆ ನೋಡಿ ನನ್ನನ್ನು ವಿಧಾನ ಸಭಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಬಳಿಕ ಪಕ್ಷಾತೀತನಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್ ಈ ಹಿಂದೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಯಲ್ಲಿ ವಿಡಿಯೊ ಗೇಮ್, ಸ್ಕಿಲ್ ಗೇಮ್, ಹುಕ್ಕಾಬಾರ್ ನಿಷೇಧಿಸಿ ಅನೇಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿಸಿದ್ದೆ. ಸ್ಯಾಂಡ್ ಬಜಾರ್ ಆ್ಯಪ್ ಜಾರಿಗೊಳಿಸಿದ್ದೆ ಎಂದು ನುಡಿದರು.

ನನಗೆ ಕ್ಷೇತ್ರದ ಜನರು ಮುಖ್ಯ. ಜಾತಿ ಹಾಗೂ ಧರ್ಮ ಒಂದು ಗೌರವ ಮಾತ್ರ. ಯಾವುದೇ ಸ್ಥಾನವನ್ನು ಅಲಂಕರಿಸಿದರೂ ಪಕ್ಷದ ತತ್ವ ಸಿದ್ಧಾಂತದಡಿ ಕೆಲಸ ಮಾಡಬೇಕು. ದೇಶದ ಸಂವಿಧಾನದ ವ್ಯಾಪ್ತಿಯಲ್ಲಿ ಕೆಲಸ ಮಾಡುವುದು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವಾಗಿದೆ ಎಂದು ಖಾದರ್ ಹೇಳಿದರು.

Vishwa News 24

Recent Posts

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

5 minutes ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

20 minutes ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

28 minutes ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

1 hour ago

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ – vishwanews24

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…

2 hours ago

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ – vishwanews24

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…

2 hours ago