Featured

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌ – Vishwanews24

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌

ಹಾವೇರಿ: ‘ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ. ಆದಿಚುಂಚನಗಿರಿ ಸ್ವಾಮಿಗಳು. ನಾನು 4 ಬಾರಿ ಶಾಸಕ, 2 ಬಾರಿ ಮಂತ್ರಿಯಾಗಿದ್ದೇನೆ. ಒಕ್ಕಲಿಗರ ಮಠದಲ್ಲಿ ಬೆಳೆದ ಹುಡುಗ ನಾನು’ ಎಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳುವ ಮೂಲಕ ಒಕ್ಕಲಿಗರ ವಿರೋಧಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಆದಿಚುಂಚನಗಿರಿ ಸ್ವಾಮೀಜಿಗಳ ಆದೇಶದ ಮೇರೆಗೆ ನಾನು ಜೆಡಿಎಸ್‌ಗೆ ಹೋಗಿದ್ದು. ಸ್ವಾಮೀಜಿ ಹಾಗೂ ಒಕ್ಕಲಿಗರ ಜೊತೆ ನನಗೆ ಎಂಥ ಬಾಂಧವ್ಯವಿದೆ ಎಂಬುದನ್ನು ಆ ಮಠದಲ್ಲಿ ಹೋಗಿ ಕೇಳಿ ನಿಮಗೆ ಗೊತ್ತಾಗುತ್ತೆ’ ಎಂದರು.

ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ಆದರೂ ನನ್ನ ರಾಜಕೀಯ ಗುರುಗಳು ದೇವೇಗೌಡರು. 2005ರಲ್ಲಿ ನನ್ನನ್ನು ಗೆಲ್ಲಿಸಿ ಈ ಮಟ್ಟಕ್ಕೆ ಬೆಳೆಸಿದ್ದಾರೆ. ದೇವೇಗೌಡರಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿರೋದು. ಜಾತಿಗಳನ್ನು ಚೀಪಾಗಿ ನೋಡ್ತಿರೋದು ಬಿಜೆಪಿಯವರು’ ಎಂದು ಜಮೀರ್‌ ಹೇಳುವ ಮೂಲಕ ಸಚಿವ ಆರ್‌.ಅಶೋಕ್‌ ಹೇಳಿಕೆಗೂ ತಿರುಗೇಟು ನೀಡಿದರು.

ಭಾರತ್ ಮಾತಾ ಕಿ ಜೈ ಅನ್ನೋದು ಆಗಲೂ ಇದೆ, ಅದನ್ನು ಹೇಳಿಯೇ ಕಾಂಗ್ರೆಸ್ ಇದುವರೆಗೂ ಮತ ಪಡೆದಿದೆ. ಈ ರೀತಿ ಮಾತನಾಡಿ ಬಿಜೆಪಿಯರವರು ದೇಶ ಹಾಳು ಮಾಡಿದ್ದಾರೆ. ಹಿಂದೂ-ಮುಸಲ್ಮಾನರ ನಡುವೆ ಜಗಳ ತಂದಿಟ್ಟು, ಅಧಿಕಾರಕ್ಕೆ ಬರುತ್ತಾರೆ ಎಂದು ಟೀಕಿಸಿದರು.

ಇದನ್ನೂ ಓದಿ : ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ : ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ – Vishwanews24 

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

13 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

30 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

37 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

47 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

55 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

1 hour ago