ಹಾವೇರಿ: ‘ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ. ಆದಿಚುಂಚನಗಿರಿ ಸ್ವಾಮಿಗಳು. ನಾನು 4 ಬಾರಿ ಶಾಸಕ, 2 ಬಾರಿ ಮಂತ್ರಿಯಾಗಿದ್ದೇನೆ. ಒಕ್ಕಲಿಗರ ಮಠದಲ್ಲಿ ಬೆಳೆದ ಹುಡುಗ ನಾನು’ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳುವ ಮೂಲಕ ಒಕ್ಕಲಿಗರ ವಿರೋಧಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಆದಿಚುಂಚನಗಿರಿ ಸ್ವಾಮೀಜಿಗಳ ಆದೇಶದ ಮೇರೆಗೆ ನಾನು ಜೆಡಿಎಸ್ಗೆ ಹೋಗಿದ್ದು. ಸ್ವಾಮೀಜಿ ಹಾಗೂ ಒಕ್ಕಲಿಗರ ಜೊತೆ ನನಗೆ ಎಂಥ ಬಾಂಧವ್ಯವಿದೆ ಎಂಬುದನ್ನು ಆ ಮಠದಲ್ಲಿ ಹೋಗಿ ಕೇಳಿ ನಿಮಗೆ ಗೊತ್ತಾಗುತ್ತೆ’ ಎಂದರು.
ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ಆದರೂ ನನ್ನ ರಾಜಕೀಯ ಗುರುಗಳು ದೇವೇಗೌಡರು. 2005ರಲ್ಲಿ ನನ್ನನ್ನು ಗೆಲ್ಲಿಸಿ ಈ ಮಟ್ಟಕ್ಕೆ ಬೆಳೆಸಿದ್ದಾರೆ. ದೇವೇಗೌಡರಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿರೋದು. ಜಾತಿಗಳನ್ನು ಚೀಪಾಗಿ ನೋಡ್ತಿರೋದು ಬಿಜೆಪಿಯವರು’ ಎಂದು ಜಮೀರ್ ಹೇಳುವ ಮೂಲಕ ಸಚಿವ ಆರ್.ಅಶೋಕ್ ಹೇಳಿಕೆಗೂ ತಿರುಗೇಟು ನೀಡಿದರು.
ಭಾರತ್ ಮಾತಾ ಕಿ ಜೈ ಅನ್ನೋದು ಆಗಲೂ ಇದೆ, ಅದನ್ನು ಹೇಳಿಯೇ ಕಾಂಗ್ರೆಸ್ ಇದುವರೆಗೂ ಮತ ಪಡೆದಿದೆ. ಈ ರೀತಿ ಮಾತನಾಡಿ ಬಿಜೆಪಿಯರವರು ದೇಶ ಹಾಳು ಮಾಡಿದ್ದಾರೆ. ಹಿಂದೂ-ಮುಸಲ್ಮಾನರ ನಡುವೆ ಜಗಳ ತಂದಿಟ್ಟು, ಅಧಿಕಾರಕ್ಕೆ ಬರುತ್ತಾರೆ ಎಂದು ಟೀಕಿಸಿದರು.
ಇದನ್ನೂ ಓದಿ : ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ : ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…