Featured

ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ; ಯಾವುದೇ ವಿಚಾರದಲ್ಲಿ ಬೇಧ ಭಾವ ಇಲ್ಲ..:ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ಈ ವಿಚಾರದಲ್ಲಿ ಯಾವುದೇ ಬೇಧ ಭಾವ ಇಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಬಜೆಟ್‌ನಲ್ಲಿ ತಾರತಮ್ಯದ ಆರೋಪದಲ್ಲಿ ತೊಡಗಿರುವ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. 

ಮೋದಿ ಸರಕಾರ ಇಂಧನದ ಮೇಲೆ ಹತ್ತು ರೂ. ಸೆಸ್ ಜಾಸ್ತಿ ಮಾಡಿದರೂ ಮಾಧ್ಯಮಗಳು ಹೊಗಳುತ್ತವೆ. ಆದರೆ ನಮ್ಮ ಸರಕಾರದ ಮೇಲೆ ಮಾತ್ರ ಯಾಕೆ ಟೀಕೆ ಮಾಡುತ್ತಿದೆ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ರೈತ ಕುಟುಂಬಗಳಲ್ಲಿ ನಡೆಯುತ್ತಿರುವ ಅತ್ಮಹತ್ಯೆ ತಪ್ಪಿಸಲು ಸಾಲ ಮನ್ನಾ ನಿರ್ಧಾರ ಮಾಡಲಾಗಿದೆ. ಇದು ಕಷ್ಟದ ಕೆಲಸ ಎಂದೂ ಹೇಳಿದ್ದಾರೆ. ಜತೆಗೆ, ಮುಂದಿನ ತಿಂಗಳಿನಿಂದ ವಿಶೇಷ ಚೇತನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಸಿಎಂ ಪ್ರಕಟಿಸಿದ್ದಾರೆ. 

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’…ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ  ಕೇಳಿದ ಪ್ರಶ್ನೆ.

ಕರ್ನಾಟಕ ವಿಕಲಚೇತನ ಸೇವಾ  ಸಂಸ್ಥೆ ಒಕ್ಕೂಟ ಆಯೋಜಿಸಿದ್ದ ಸ್ಪಂದನ ಕಾರ್ಯಕ್ರಮದಲ್ಲಿ  ಸಿಎಂ ಮಾಧ್ಯಮಗಳ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.

‘ನಾನು ಪೆಟ್ರೋಲ್‌ ಡಿಸೇಲ್‌ ಬೆಲೆ ಕೇವಲ 1 ರೂಪಾಯಿ ಹೆಚ್ಚು ಮಾಡಿದರೆ ಮಂಗಳೂರಿನ ಮೀನುಗಾರರ ಮಹಿಳೆಯ ಬಳಿ ”ಕುಮಾರಸ್ವಾಮಿ ಇಸ್‌ ನಾಟ್‌ ಅವರ್‌ ಸಿಎಂ” ಅಂತ ಹೇಳಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ 11 ಬಾರಿ ಬೆಲೆ ಏರಿಕೆ ಮಾಡಿದಾಗ ಚಕಾರ ಎತ್ತಿಲ್ಲ ಯಾಕೆ’ ಎಂದು ಪ್ರಶ್ನಿಸಿದರು.

‘ನಾನು ಜನಸಾಮಾನ್ಯರ ಪರವಾಗಿರುವ ಸಿಎಂ. ವಿದ್ಯುತ್‌ ಬಿಲ್‌ 10 ರೂಪಾಯಿ ಮಾತ್ರ ಏರಿಕೆ ಮಾಡಿದ್ದೇನೆ. ಬಡವರೂ ಕೂಡ 20 ರೂಪಾಯಿ ಕೊಟ್ಟು ಮಿನರಲ್‌ ವಾಟರ್‌ ಖರೀದಿಸುತ್ತಾರೆ’ ಎಂದು ತನ್ನ ಸರ್ಕಾರ ತೆರಿಗೆ ಹೆಚ್ಚಳದ ಕ್ರಮವನ್ನು ಸಮರ್ಥಿಸಿಕೊಂಡರು.

‘ನಾನು ಮುಖ್ಯಮಂತ್ರಿ ಆಗಿ ಕೇವಲ 2 ತಿಂಗಳು ಆಗಿದೆ. ಸಮಸ್ಯೆಗಳೆಲ್ಲಾ 70 ವರ್ಷಗಳಿಂದ ಇರಲಿಲ್ಲವೇ? ನಾನು ಬಡವರ ಪರ ಕಾಳಜಿಯುಳ್ಳ ಎಲ್ಲಾ ಜಿಲ್ಲೆಗಳ ಸಿಎಂ. ಟೀಕೆ ಮಾಡುವುದನ್ನ ನಿಲ್ಲಿಸಿ. ನನಗೆ ಸ್ವಲ್ಪ ಕಾಲಾವಕಾಶ ನೀಡಿ’ ಎಂದು ಮನವಿ ಮಾಡಿದರು.

‘ಮಾಧ್ಯಮಗಳು ಯಾವುದೇ ವಿಷಯವಿಲ್ಲದೆ ಸುದ್ದಿ ಮಾಡುತ್ತೀರಿ. ಜನರ ನಡುವೆ ಕಂದಕ ಸೃಷ್ಟಿಸುತ್ತೀರಿ ನಮ್ಮ ನಡುವೆ ಅನುಮಾನ ಮೂಡಿಸುತ್ತೀರಿ’ ಎಂದು ಕಿಡಿ ಕಾರಿದರು.

‘ನನ್ನ ಮೇಲೆ ನಿಮಗೆ ಕನಿಕರ ಇಲ್ಲವೆ ? ಯಾಕೆ ನನ್ನ ಮೇಲೆ ಇಷ್ಟು ಕೋಪ ? ಎಷ್ಟು ದಿನ ಅಂತ ನನ್ನ ಮೇಲೆ ಸುಳ್ಳು ಸುದ್ದಿ ಮಾಡುತೀರಿ? ಅಪಪ್ರಚಾರ ಮಾಡಬೇಡಿ’ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago