Featured

ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ; ಯಾವುದೇ ವಿಚಾರದಲ್ಲಿ ಬೇಧ ಭಾವ ಇಲ್ಲ..:ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ಈ ವಿಚಾರದಲ್ಲಿ ಯಾವುದೇ ಬೇಧ ಭಾವ ಇಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಬಜೆಟ್‌ನಲ್ಲಿ ತಾರತಮ್ಯದ ಆರೋಪದಲ್ಲಿ ತೊಡಗಿರುವ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. 

ಮೋದಿ ಸರಕಾರ ಇಂಧನದ ಮೇಲೆ ಹತ್ತು ರೂ. ಸೆಸ್ ಜಾಸ್ತಿ ಮಾಡಿದರೂ ಮಾಧ್ಯಮಗಳು ಹೊಗಳುತ್ತವೆ. ಆದರೆ ನಮ್ಮ ಸರಕಾರದ ಮೇಲೆ ಮಾತ್ರ ಯಾಕೆ ಟೀಕೆ ಮಾಡುತ್ತಿದೆ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ರೈತ ಕುಟುಂಬಗಳಲ್ಲಿ ನಡೆಯುತ್ತಿರುವ ಅತ್ಮಹತ್ಯೆ ತಪ್ಪಿಸಲು ಸಾಲ ಮನ್ನಾ ನಿರ್ಧಾರ ಮಾಡಲಾಗಿದೆ. ಇದು ಕಷ್ಟದ ಕೆಲಸ ಎಂದೂ ಹೇಳಿದ್ದಾರೆ. ಜತೆಗೆ, ಮುಂದಿನ ತಿಂಗಳಿನಿಂದ ವಿಶೇಷ ಚೇತನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಸಿಎಂ ಪ್ರಕಟಿಸಿದ್ದಾರೆ. 

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’…ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ  ಕೇಳಿದ ಪ್ರಶ್ನೆ.

ಕರ್ನಾಟಕ ವಿಕಲಚೇತನ ಸೇವಾ  ಸಂಸ್ಥೆ ಒಕ್ಕೂಟ ಆಯೋಜಿಸಿದ್ದ ಸ್ಪಂದನ ಕಾರ್ಯಕ್ರಮದಲ್ಲಿ  ಸಿಎಂ ಮಾಧ್ಯಮಗಳ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.

‘ನಾನು ಪೆಟ್ರೋಲ್‌ ಡಿಸೇಲ್‌ ಬೆಲೆ ಕೇವಲ 1 ರೂಪಾಯಿ ಹೆಚ್ಚು ಮಾಡಿದರೆ ಮಂಗಳೂರಿನ ಮೀನುಗಾರರ ಮಹಿಳೆಯ ಬಳಿ ”ಕುಮಾರಸ್ವಾಮಿ ಇಸ್‌ ನಾಟ್‌ ಅವರ್‌ ಸಿಎಂ” ಅಂತ ಹೇಳಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ 11 ಬಾರಿ ಬೆಲೆ ಏರಿಕೆ ಮಾಡಿದಾಗ ಚಕಾರ ಎತ್ತಿಲ್ಲ ಯಾಕೆ’ ಎಂದು ಪ್ರಶ್ನಿಸಿದರು.

‘ನಾನು ಜನಸಾಮಾನ್ಯರ ಪರವಾಗಿರುವ ಸಿಎಂ. ವಿದ್ಯುತ್‌ ಬಿಲ್‌ 10 ರೂಪಾಯಿ ಮಾತ್ರ ಏರಿಕೆ ಮಾಡಿದ್ದೇನೆ. ಬಡವರೂ ಕೂಡ 20 ರೂಪಾಯಿ ಕೊಟ್ಟು ಮಿನರಲ್‌ ವಾಟರ್‌ ಖರೀದಿಸುತ್ತಾರೆ’ ಎಂದು ತನ್ನ ಸರ್ಕಾರ ತೆರಿಗೆ ಹೆಚ್ಚಳದ ಕ್ರಮವನ್ನು ಸಮರ್ಥಿಸಿಕೊಂಡರು.

‘ನಾನು ಮುಖ್ಯಮಂತ್ರಿ ಆಗಿ ಕೇವಲ 2 ತಿಂಗಳು ಆಗಿದೆ. ಸಮಸ್ಯೆಗಳೆಲ್ಲಾ 70 ವರ್ಷಗಳಿಂದ ಇರಲಿಲ್ಲವೇ? ನಾನು ಬಡವರ ಪರ ಕಾಳಜಿಯುಳ್ಳ ಎಲ್ಲಾ ಜಿಲ್ಲೆಗಳ ಸಿಎಂ. ಟೀಕೆ ಮಾಡುವುದನ್ನ ನಿಲ್ಲಿಸಿ. ನನಗೆ ಸ್ವಲ್ಪ ಕಾಲಾವಕಾಶ ನೀಡಿ’ ಎಂದು ಮನವಿ ಮಾಡಿದರು.

‘ಮಾಧ್ಯಮಗಳು ಯಾವುದೇ ವಿಷಯವಿಲ್ಲದೆ ಸುದ್ದಿ ಮಾಡುತ್ತೀರಿ. ಜನರ ನಡುವೆ ಕಂದಕ ಸೃಷ್ಟಿಸುತ್ತೀರಿ ನಮ್ಮ ನಡುವೆ ಅನುಮಾನ ಮೂಡಿಸುತ್ತೀರಿ’ ಎಂದು ಕಿಡಿ ಕಾರಿದರು.

‘ನನ್ನ ಮೇಲೆ ನಿಮಗೆ ಕನಿಕರ ಇಲ್ಲವೆ ? ಯಾಕೆ ನನ್ನ ಮೇಲೆ ಇಷ್ಟು ಕೋಪ ? ಎಷ್ಟು ದಿನ ಅಂತ ನನ್ನ ಮೇಲೆ ಸುಳ್ಳು ಸುದ್ದಿ ಮಾಡುತೀರಿ? ಅಪಪ್ರಚಾರ ಮಾಡಬೇಡಿ’ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

13 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

17 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

33 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

55 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago